ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 11 ಜನವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಒಳ್ಳೆಯತನದ ಬಗ್ಗೆ ಇನ್ನೊಬ್ಬರ ಮುಂದೆ ಸಾಬೀತುಪಡಿಸಬೇಕಾಗಿಲ್ಲ. ಒಳ್ಳೆಯ ಕೆಲಸಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಹೊಸದಾಗಿ ಕೆಲವೊಂದು ಜವಾಬ್ಧಾರಿಗಳನ್ನು ನಿಭಾಯಿಸಬೇಕಾಗಿ ಬಂದಾಗ ತಾಳ್ಮೆ ಕಳೆದುಕೊಳ್ಳುವ ಪ್ರಸಂಗ ಎದುರಾದೀತು. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಮಿಥುನ: ಹಿಂದೆ ನಿಮ್ಮಿಂದ ಸಾಲ ಪಡೆದಿದ್ದವರು ಮರಳಿ ನೀಡಲಿದ್ದಾರೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಿದ್ಯಾರ್ಥಿಗಳಿಗೆ ಕಲಿಕೆಗೆ ನೂತನ ಅವಕಾಶಗಳು ದೊರೆಯಲಿವೆ.

ಕರ್ಕಟಕ: ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ತಕ್ಕಮಟ್ಟಿನ ಯಶಸ್ಸು ನಿಮ್ಮದಾಗುವುದು. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಸಿಂಹ: ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಸತ್ಕಾರ್ಯಕ್ಕೆ ಧನವಿನಿಯೋಗ ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಥತೆ ನಡೆಸಲಿದ್ದೀರಿ. ನಿಮ್ಮ ವಾಕ್ಚತುರತೆಯಿಂದ ಕಾರ್ಯ ಸಾಫಲ್ಯತೆ ಕಂಡುಬರಲಿದೆ. ಚಿಂತೆ ಬೇಡ.

ತುಲಾ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬಸ್ಥರ ಸಹಕಾರ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ತಾಳ್ಮೆಯಿರಲಿ.

ವೃಶ್ಚಿಕ: ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದು, ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ. ಕೆಳ ಹಂತದ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು.

ಧನು: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ, ಶ್ರೇಯಸ್ಸು ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವುಂಟಾದೀತು. ಕೆಟ್ಟ ಸ್ನೇಹಿತರ ಸಂಗದಿಂದ ದೂರವಿರುವುದು ಉತ್ತಮ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕುಲದೇವರ ಪ್ರಾರ್ಥನೆ ನಡೆಸಿ.

ಕುಂಭ: ಮನಸ್ಸಿನಲ್ಲಿರುವ ಮಾತುಗಳನ್ನು ಕೆಲವೊಂದು ಸಂದರ್ಭದಲ್ಲಿ ಆಡದೇ ಇದ್ದರೇ ಕ್ಷೇಮ. ಕೌಟುಂಬಿಕವಾಗಿ ಸಮಾಧಾನಕರ ವಾತಾವರಣವಿರಲಿದೆ. ಮಕ್ಕಳಿಂದ ಸಂತೋಷದ ಸುದ್ದಿ ಕೇಳಿಬರಲಿದೆ.

ಮೀನ: ಯಾವುದಾದರೂ ವಸ್ತು, ವ್ಯಕ್ತಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದರೆ ನಿರಾಸೆಯಾದೀತು. ಅನಿರೀಕ್ಷಿತ ಖರ್ಚು ವೆಚ್ಚದ ಸಾಧ್ಯತೆ. ಮಾತೃ ಸಮಾನರಿಂದ ಕೆಲಸ ಕಾರ್ಯಗಳಿಗೆ ಸಾಥ್ ಸಿಗುವುದು. ತಾಳ್ಮೆ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments