Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 14 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಹೋದರ ಸಮಾನರಿಗೆ ಸಹಾಯ ಮಾಡಲಿದ್ದೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಪರವೂರಿನ ವ್ಯವಹಾರದಿಂದ ನಷ್ಟದ ಭೀತಿ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸದೊತ್ತಡ.

ವೃಷಭ: ಮಕ್ಕಳಿಂದ ನಿಮ್ಮ ಸಂತೋಷ ಹೆಚ್ಚಲಿದೆ. ಆರ್ಥಿಕ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಹೊಸ ಮಿತ್ರರಿಂದ ಕಾರ್ಯಾನುಕೂಲವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪಾರದರ್ಶಕತೆಗೆ ಅವಕಾಶ ನೀಡಿ. ನೂತನವಾಗಿ ಕೆಲಸಕ್ಕೆ ಸೇರಿಕೊಂಡಿದ್ದರೆ ಸವಾಲುಗಳು ಎದುರಾದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಅಧಿಕ ಶ್ರಮದಾಯಕ ಕೆಲಸದಿಂದ ದೇಹಾಯಾಸವಾದೀತು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಎಚ್ಚರಿಕೆಯಿರಲಿ.

ಸಿಂಹ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವ ಸಾಧ‍್ಯತೆ. ಇನ್ನೊಬ್ಬರಿಗೆ ಭರವಸೆ ಕೊಡುವ ಮುನ್ನ ಯೋಚನೆ ಮಾಡಿ ನಿರ್ಧಾರಕ್ಕೆ ಬನ್ನಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪರಿಸ್ಥಿತಿಯಿರಲಿದೆ.

ಕನ್ಯಾ: ಆಸ್ತಿ ಪರಭಾರೆ ವಿಚಾರಗಳಲ್ಲಿ ತೊಂದರೆಗಳು ಕಂಡುಬಂದೀತು. ಆದರೆ ಕೌಟುಂಬಿಕವಾಗಿ ನಿಮಗೆ ಬೆಂಬಲ ಸಿಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಅನಗತ್ಯ ಚಿಂತೆ ಬೇಡ.

ತುಲಾ: ಮನರಂಜನಾ ಕೆಲಸಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಹಣಕಾಸಿನ ವಿಚಾರದಲ್ಲಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಎಚ್ಚರಿಕೆಯ ಹೆಜ್ಜೆಯಿಡುವುದು ಉತ್ತಮ. ಹಿತ ಶತ್ರುಗಳ ಕಾಟ ಕಂಡುಬಂದೀತು. ಕಾರ್ಯರಂಗದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗುವುದು. ಬಂಧು ಮಿತ್ರರನ್ನು ಭೇಟಿ ಮಾಡಲಿದ್ದೀರಿ.

ಧನು: ಮನೆಯವರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಯೋಗ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ.

ಮಕರ: ದೂರದ ವ್ಯವಹಾರಗಳಿಂದ ಧನಾಗಮನವಾಗಲಿದೆ. ಅಧ್ಯಯನ ಶೀಲರಿಗೆ ಅನುಕೂಲಕರ ವಾತಾವರಣ. ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಉತ್ಸಾಹ ಕಂಡುಬರಲಿದೆ. ಇಷ್ಟಭೋಜನ ಮಾಡಲಿದ್ದೀರಿ.

ಕುಂಭ: ಸರಕಾರೀ ನೌಕರರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ.

ಮೀನ: ಮಹಿಳೆಯರಿಗೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಕೆಲಸ ಕಾರ್ಯಗಳಲ್ಲಿ ಗುರುಹಿರಿಯರ ಮಾರ್ಗದರ್ಶನ ಪಡೆಯಲಿದ್ದೀರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments