Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 17 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಯಾವುದೋ ವಿಚಾರಕ್ಕೆ ಮಾನಸಿಕವಾಗಿ ಕೊರಗುವುದನ್ನು ಬಿಟ್ಟು ಪ್ರಾಯೋಗಿಕವಾಗಿ ಯೋಚಿಸಿ ಮುನ್ನಡೆಯುವುದು ಉತ್ತಮ. ವಿದ್ಯಾರ್ಥಿಗಳು ಉತ್ತಮ ಅವಕಾಶಗಳು ಬಂದಾಗ ಬಳಸಿಕೊಳ್ಳುವುದು ಉತ್ತಮ.

ವೃಷಭ: ಪರರ ಬಗ್ಗೆ ಅತಿಯಾದ ಚಿಂತೆ ಮಾಡುವುದನ್ನು ಬಿಟ್ಟು ವೈಯಕ್ತಿಕ ಜೀವನದ ಕಡೆಗೆ ಗಮನಕೊಡಿ. ಪ್ರೀತಿ ಪಾತ್ರರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮಿಥುನ: ಎಷ್ಟೇ ಅಸಮಾಧಾನಗಳಿದ್ದರೂ ಆತ್ಮೀಯರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮುಂದೆ ಸಾಗಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ. ವ್ಯಾಪಾರಿಗಳಿಗೆ ಹಿನ್ನಡೆಯಾದೀತು.

ಕರ್ಕಟಕ: ಇನ್ನೊಬ್ಬರು ನಿಮ್ಮ ಬಗ್ಗೆ ಮಾತನಾಡಲು ಅವಕಾಶ ಕೊಡಬೇಡಿ. ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಬೇಕಾಗುತ್ತದೆ. ನಿಮ್ಮಲ್ಲಿರುವ ಕ್ರಿಯಾತ್ಮಕ ಶಕ್ತಿಯನ್ನು ಹೊರತರಲು ಅವಕಾಶ ಸಿಗುವುದು.

ಸಿಂಹ: ಕಾರ್ಯರಂಗದಲ್ಲಿ ಎಷ್ಟೇ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸ್ವಯಂ ವೃತ್ತಿಯವರಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು.

ಕನ್ಯಾ: ವಿದ್ಯಾರ್ಥಿಗಳಿಗೆ, ಅಧ‍್ಯಯನಶೀಲರಿಗೆ ಪರವೂರಿಗೆ ಪ್ರಯಾಣಿಸುವ ಅವಕಾಶ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಲು ಮುಂದಾಗಲಿದ್ದೀರಿ.

ತುಲಾ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗ. ಉದ್ಯೋಗ, ವ್ಯವಹಾರದಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋಗಬೇಡಿ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಮನಸ್ಸಿನಲ್ಲಿರುವ ಕೆಲಸವನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ವಿಶೇಷ ಭೋಜನ ತಯಾರಿಸಲಿದ್ದೀರಿ. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ‍್ಯತೆ.

ಮಕರ: ಮನೆಯಲ್ಲಿ ಸಂತೋಷ, ಸಮೃದ್ಧಿಯಿರಲಿದೆ. ಕೌಟುಂಬಿಕವಾಗಿ ಕ್ಷೇಮಾಭಿವೃದ್ಧಿಗಾಗಿ ದೇವತಾ ಕಾರ್ಯ ನೆರವೇರಿಸಲಿದ್ದೀರಿ. ದಂಪತಿಗಳಲ್ಲಿ ಹೊಂದಾಣಿಕೆ ಅಗತ್ಯ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಸಾಧ‍್ಯತೆ. ಸ್ವಯಂ ವೃತ್ತಿಯವರಿಗೆ ಅಧಿಕ ಶ್ರಮವಿದ್ದರೂ ಅದಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಗುರುಹಿರಿಯರ ಸಲಹೆ ಪಾಲಿಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಬಹಿರಂಗವಾಗಿ ಕೆಲವೊಂದು ವಿಚಾರ ಹೇಳಿಕೊಳ್ಳಲಾಗದೇ ಮನಸ್ಸಿನಲ್ಲೇ ಕೊರಗುವ ಪರಿಸ್ಥಿತಿ ಎದುರಾದೀತು. ಗೃಹದಲ್ಲಿ ಅಶಾಂತಿಗೆ ಅವಕಾಶ ಕೊಡಬೇಡಿ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments