Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 18 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಅಪಾಯ ಸಾಧ್ಯತೆ.

ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದೂರದ ಮಿತ್ರರ ಸಮಾಗಮ ಸಾಧ‍್ಯತೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ವ್ಯಾಪಾರಿಗಳಿಗೆ ಆದಾಯ ವೃದ್ಧಿಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ.

ಮಿಥುನ: ನಿರ್ಧಾರ ತೆಗೆದುಕೊಳ್ಳುವಾಗ ಮಾನಸಿಕವಾಗಿ ಗೊಂದಲಗಳು ಕಾಡೀತು. ಆಪ್ತರ ಸಲಹೆ ಪಾಲಿಸುವುದು ಉತ್ತಮ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದೀರಿ.

ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಧನಾದಾಯ ಹೆಚ್ಚಳಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ತಾಳ್ಮೆಯಿರಲಿ.

ಸಿಂಹ: ಆಹಾರ ಸೇವನೆಯಲ್ಲಿ ಮಿತಿಯಿರಲಿ. ಇಲ್ಲದೇ ಹೋದರೆ ಆರೋಗ್ಯ ಸಮಸ್ಯೆಯಾದೀತು. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಹಿಂದೆ ಮಾಡಿದ ಸತ್ಕಾರ್ಯಗಳಿಗೆ ತಕ್ಕ ಫಲ ಪಡೆಯಲಿದ್ದೀರಿ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ಅತೀ ಕಾಳಜಿ ವಹಿಸಿ ಮಾಡುವ ಕೆಲಸಗಳಲ್ಲೂ ಕೆಲವೊಮ್ಮೆ ಅಚಾತುರ್ಯ ಸಂಭವಿಸೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಆತುರದ ನಿರ್ಣಯ ಬೇಡ. ತಾಳ್ಮೆ ಅಗತ್ಯ.

ತುಲಾ: ನಿಮ್ಮ ಭವಿಷ್ಯಕ್ಕಾಗಿ ಕೆಲವೊಂದು ತೀರ್ಮಾನ ಕೈಗೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಿದ್ದರೆ ಕೆಲಸಗಾರರಿಂದ ತೊಂದರೆಗಳು ಎದುರಾದೀತು. ತಾಳ್ಮೆಯಿಂದ ವ್ಯವಹರಿಸಬೇಕು. ಆರೋಗ್ಯದ ಕಡೆಗೆ ಗಮನವಿರಲಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ವಿಶೇಷವಾದ ಸೌಲಭ್ಯ ಪಡೆಯಲಿದ್ದೀರಿ. ಬೇರೆಯವರ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ವಿವಾಹಾದಿ ಪ್ರಯತ್ನಗಳಿಗೆ ತಕ್ಕ ಫಲ ಸಿಗುವುದು.

ಧನು: ಸಾಂಸಾರಿಕವಾಗಿ ಬಿಡುವಿಲ್ಲದ ಕೆಲಸಗಳಿಂದಾಗಿ ದೇಹಾಯಾಸವಾದೀತು. ಸಂಗಾತಿಯೊಂದಿಗೆ ಅಸಮಾಧಾನ ತೋರಿಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನದಿಂದ ಮಾನಸಿಕವಾಗಿ ತೃಪ್ತಿ ಕಂಡುಬರಲಿದೆ.

ಮಕರ: ಉನ್ನತ ಸ್ಥಾನಮಾನ ಪಡೆಯುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಹೊಸದಾಗಿ ಪರಿಚಿತರಾದವರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಾಯವಾದೀತು. ಮನೆಯಲ್ಲಿ ಅಶಾಂತಿಗೆ ಅವಕಾಶ ಕೊಡಬೇಡಿ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಆದರೆ ನಿಮ್ಮಲ್ಲಿರುವ ಕ್ರಿಯಾತ್ಮಕ ಶಕ್ತಿಯನ್ನು ಹೊರತರಲು ಅವಕಾಶ ಸಿಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮೀನ: ನೂತನ ವ್ಯವಹಾರದಲ್ಲಿ ಪ್ರಾಮಾಣಿಕತೆಗೆ ಅವಕಾಶ ನೀಡುವುದು ಉತ್ತಮ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸುವ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ನಿಮ್ಮ ಸ್ವತಂತ್ರ ಆಲೋಚನೆಗಳು ಇತರರಿಗೆ ಕಿರಿ ಕಿರಿಯಾಗದಂತೆ ನೋಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?