Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 19 ಜನವರಿ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಠಮಾರೀ ಮನೋಭಾವ ಬಿಟ್ಟು ಕೆಲಸ ಕಾರ್ಯದಲ್ಲಿ ಪರಸ್ಪರ ಸಹಕಾರ ತೋರಿದರೆ ಯಶಸ್ಸು ನಿಮ್ಮದಾಗಲಿದೆ. ಮಕ್ಕಳ ವಿಚಾರದಲ್ಲಿ ಅಸಡ್ಡೆ ಬೇಡ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ವೃಷಭ: ಬೇಡದ ಯೋಚನೆಗಳಿಂದಾಗಿ ಮನಸ್ಸು ಭಾರವಾದೀತು. ಆಪ್ತರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಮಿಥುನ: ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆ ಕಾಣಿಸಿಕೊಂಡೀತು. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಪ್ರಾಮಾಣಿಕತೆಗೆ ತಕ್ಕ ಪ್ರಯತ್ನ ಸಿಗಲಿದೆ. ಗುರುಹಿರಿಯರ ಮಾರ್ಗದರ್ಶನದಿಂದ ಲಾಭವಾಗಲಿದೆ. ಆಸ್ತಿ ವಿವಾದಗಳು ಬಗೆಹರಿಯಲಿವೆ. ಚಿಂತೆ ಬೇಡ.

ಸಿಂಹ: ಇನ್ನೊಬ್ಬರ ಮೇಲೆ ಅತಿಯಾದ ಅವಲಂಬನೆಯೂ ಒಳ್ಳೆಯದಲ್ಲ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ನಿಮ್ಮ ಸಾಮರ್ಥ್ಯ ಮೀರಿ ಕಾರ್ಯನಿರ್ವಹಿಸಬೇಕಾಗುತ್ತದೆ. ಕೆಲಸದ ನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ಹೆತ್ತವರಿಗೆ ನಿಮ್ಮ ಸಾಧನೆ ಸಂತೋಷ ಕೊಡಲಿದೆ. ವಾಹನ ಪ್ರಯಾಣದಲ್ಲಿ ಎಚ್ಚರ.

ತುಲಾ: ಕಾರ್ಯಸಾಧನೆಗಾಗಿ ಕತ್ತೆ ಕಾಲು ಹಿಡಿ ಎಂಬ ಪರಿಸ್ಥಿತಿ ನಿಮ್ಮದಾಗಲಿದೆ. ಹಳೆಯ ಅಸಮಾಧಾನಗಳನ್ನು ಮರೆತು ಮುನ್ನಡೆಯಬೇಕಾಗುತ್ತದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು  ವೆಚ್ಚವಾಗಲಿದೆ.

ವೃಶ್ಚಿಕ: ನಿರುದ್ಯೋಗಿಗಳಿಗೆ ಉದ್ಯೋಗ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಸುಬ್ರಹ್ಮಣ್ಯನ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಬರಲಿವೆ. ಚಿಂತೆ ಬೇಡ.

ಧನು: ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಕಾರ್ಯರಂಗದಲ್ಲಿ ಅಡೆತಡೆಗಳು ಕಂಡುಬಂದರೂ ನಿಮ್ಮ ಏಳಿಗೆ ತಡೆಯಲಾಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಹಿಂದೆ ಮಾಡಿದ ಒಳ್ಳೆಯ ಕೆಲಸಗಳಿಗೆ ತಕ್ಕ ಫಲ ಪಡೆಯಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯಿರಲಿದೆ.

ಕುಂಭ: ಆರಂಭಿಸಲು ಹೊರಟಿದ್ದ ಕೆಲಸವನ್ನು ಅರ್ಧಕ್ಕೇ ಹಿಂಪಡೆದುಕೊಳ್ಳಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಮಾತೃ ಸಮಾನರಿಂದ ನೆಮ್ಮದಿ ಸಿಗಲಿದೆ. ಆಪ್ತರನ್ನು ಭೇಟಿಯಾಗಲಿದ್ದೀರಿ.

ಮೀನ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಿದ ನೆಮ್ಮದಿ ನಿಮ್ಮದಾಗಲಿದೆ. ಹೊಸದಾಗಿ ಕೆಲಸಕ್ಕೆ ಸೇರಿದ್ದವರಿಗೆ ಸವಾಲುಗಳು ಎದುರಾದೀತು. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?