ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 27 ಜನವರಿ 2023 (08:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಗುರುಹಿರಿಯರ ಪ್ರೀತಿ ಸಂಪಾದಿಸಲಿದ್ದೀರಿ. ಎಷ್ಟೋ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಇಂದಿನ ದಿನ ನಿಮಗೆ ಅತ್ಯಂತ ಶುಭವಾಗಿದ್ದು, ಶುಭ ಕೆಲಸಕ್ಕೆ ಚಾಲನೆ ನೀಡಲು ಸಕಾಲ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳು ಬಿಡುವಿನ ವೇಳೆಯ ಸದುಪಯೋಗ ಪಡಿಸಿಕೊಳ್ಳಲಿದ್ದಾರೆ.

ಮಿಥುನ: ಹಣಕಾಸಿನ ವಿಚಾರದಲ್ಲಿ ಆಪ್ತರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದೀರಿ. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಚಿಂತೆ ಬೇಡ.

ಸಿಂಹ: ದೈವಾನುಕೂಲದಿಂದ ಇಂದು ನೀವು ಕೈ ಹಾಕುವ ಕೆಲಸಗಳಲ್ಲಿ ಯಶಸ್ಸು ಕಾಣಲಿದ್ದೀರಿ. ದೂರದ ವ್ಯವಹಾರಗಳಿಂದ ಲಾಭ ಕಂಡುಬರುವುದು. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ವಿದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ತವರಿನ ಭೇಟಿಯ ಸುಯೋಗ. ಹಣಕಾಸಿನ ಖರ್ಚು ವೆಚ್ಚದಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮಕ್ಕಳಿಂದ ಸಂತೋಷ ಪ್ರಾಪ್ತಿಯಾಗುವುದು.

ತುಲಾ: ನಿಮ್ಮ ವಾಕ್ಚತುರತೆಯಿಂದ ಕಾರ್ಯಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಗೃಹಿಣಿಯರು ಅತಿಥಿ ಸತ್ಕಾರಕ್ಕೆ ಸಿದ್ಧರಾಗಬೇಕಾಗುತ್ತದೆ.

ವೃಶ್ಚಿಕ: ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆಯಾದರೂ ಆತಂಕಗೊಳ್ಳುವ ಸ್ಥಿತಿ ನಿಮ್ಮದಾಗುವುದು. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ನೀಡಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗುವುದು.

ಧನು: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಲ್ಯಾಣ ಪ್ರಾಪ್ತಿಯಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬಂದೀತು. ತಾಳ್ಮೆಯಿರಲಿ.

ಮಕರ: ಉದ್ವೇಗಕ್ಕೊಳಗಾಗಿ ಮಾತು, ನಿರ್ಧಾರ ತೆಗೆದುಕೊಳ್ಳುವ ಪ್ರವೃತ್ತಿ ಕಂಡುಬರಲಿದೆ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಇಂದು ಯಾರಿಗೂ ಸಾಲ ನೀಡಲು ಹೋಗಬೇಡಿ, ಮರಳಿ ಬಾರದು.

ಕುಂಭ: ಸರಕಾರೀ ನೌಕರರು ಬಿಡುವಿನ ವೇಳೆಯ ಸದುಪಯೋಗ ಪಡಿಸಿಕೊಳ್ಳಲಿದ್ದಾರೆ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಶುಭ ಕೆಲಸಗಳನ್ನು ಮಾಡಲು ಹೊರಟಾಗ ಕೆಲವೊಂದು ವಿಘ್ನಗಳು ಕಂಡುಬಂದೀತು. ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಹಿಂದೆ ಕೂಡಿಟ್ಟ ಹಣ ಅಗತ್ಯಕ್ಕೆ ಖರ್ಚಾಗಿ ಹೋದೀತು. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments