Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 1 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯಾಪಾರ, ವ್ಯವಹಾರದಲ್ಲಿ ವಿಶ್ವಾಸ ಗಳಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಏನೂ ಸಮಸ್ಯೆಯಾಗದು. ಆದರೆ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಬಹಳ ದಿನಗಳ ನಂತರ ಹಳೆಯ ಮಿತ್ರರ ಭೇಟಿ ಯೋಗ.

ವೃಷಭ: ಮುಖ್ಯವಾದ ವಿಷಯ ಮರೆತು ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹೊಸದಾಗಿ ಕೆಲಸಕ್ಕೆ ಪ್ರಯತ್ನಿಸುವವರಿಗೆ ಕೊಂಚ ಮುನ್ನಡೆ ಕಂಡುಬಂದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮೇಲಧಿಕಾರಿಗಳ ವಿಶ್ವಾಸಕ್ಕೆ ಪಾತ್ರರಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಅಡೆತಡೆಗಳು ಕಂಡುಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಕ್ರಿಯಾತ್ಮಕವಾಗಿ ಯೋಚನೆ ಮಾಡಬೇಕಾಗುತ್ತದೆ. ಸಂಗಾತಿಯ ಸಾಥ್ ಸಿಗಲಿದೆ.

ಸಿಂಹ: ಹಿಂದೆ ಮಾಡಿದ್ದ ಸಾಲ ಪಾವತಿಯಾಗಿ ಮನಸ್ಸಿಗೆ ನೆಮ್ಮದಿಯಾಗಲಿದೆ. ಇತರರೊಂದಿಗೆ ಹಣಕಾಸಿನ ವ್ಯವಹಾರ ನಡೆಸುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ಕಂಡುಬರಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಅತೃಪ್ತಿ ಕಂಡುಬಂದೀತು. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ದಾಕ್ಷಿಣ್ಯಕ್ಕೆ ಒಳಗಾಗದೇ ನಿಮಗೆ ಅನಿಸಿದ್ದನ್ನು ನೇರವಾಗಿ ಹೇಳಲಿದ್ದೀರಿ.

ತುಲಾ: ಆತ್ಮೀಯರೊಂದಿಗೆ ಉತ್ತಮ ಕ್ಷಣ ಕಳೆಯುವ ಅವಕಾಶ ಸಿಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಿಸಿಕೊಳ್ಳಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಧನು: ಗೃಹ ಸಂಬಂಧೀ ಕೆಲಸಗಳಲ್ಲಿ ಬಿಡುವಿಲ್ಲದೇ ದುಡಿಯಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮಲ್ಲಿರುವ ಕೊರತೆ ಇತರರ ಎದುರು ತೋರ್ಪಡಿಸಿಕೊಳ್ಳಬೇಡಿ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ಮಕರ: ನಿಮ್ಮ ಕ್ರಿಯಾತ್ಮಕ ಯೋಜನೆಗಳಿಗೆ ಮನೆಯವರ ಸಹಕಾರ ಸಿಗಲಿದೆ. ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಹಿಳೆಯರಿಗೆ ಹಣಕಾಸಿನ ವಿಚಾರದಲ್ಲಿ  ವಂಚನೆಯ ಭೀತಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮೀನ: ಹಠಮಾರೀತನ ಮನೋಭಾವ ಬಿಟ್ಟು ಸಹನೆಯಿಂದ ಕಾರ್ಯಪ್ರವೃತ್ತರಾದರೆ ಕೈ ಹಿಡಿಯುವ ಕೆಲಸಗಳಲ್ಲಿ ಯಶಸ್ಸು ಕಾಣಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments