Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 3 ಫೆಬ್ರವರಿ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿವಾರ್ಯ ಕಾರಣಗಳಿಗೆ ಕೆಲವೊಂದು ಯೋಜನೆಗಳನ್ನು ಮುಂದೂಡಬೇಕಾಗುತ್ತದೆ. ಆತ್ಮೀಯರನ್ನು ಭೇಟಿಯಾಗುವ ಅವಕಾಶ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ.

ವೃಷಭ: ಫಲ ವಸ್ತುಗಳನ್ನು ದಾನ ಮಾಡುವ ಯೋಗ ನಿಮ್ಮದಾಗಲಿದೆ. ಹಿರಿಯರಿಗೆ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಮಿಥುನ: ಮನೆಗೆ ವಿಶೇಷ ಅತಿಥಿಗಳನ್ನು ಬರಮಾಡಿಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಾರ್ಯರಂಗದಲ್ಲಿ ನಿಮ್ಮ ಅಧಿಕಾರದ ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಿ.

ಕರ್ಕಟಕ: ಹಣಕಾಸಿನ ವಿಚಾರದಲ್ಲಿ ವಂಚನೆಯ ಭೀತಿಯಿದ್ದು, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಪೂರ್ವಾಪರ ತಿಳಿದು ಪರರಿಗೆ ಸಹಾಯ ಮಾಡುವುದು ಉತ್ತಮ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ವಿಶೇಷಾಧಿಕಾರ ಪಡೆಯಲಿದ್ದೀರಿ. ವಿದ್ಯಾರ್ಥಿಗಳು ಅ‍ಧ್ಯಾಪಕರಿಂದ ಹೊಸ ವಿಚಾರವನ್ನು ತಿಳಿದುಕೊಳ್ಳುವ ಆಸಕ್ತಿ ಕಂಡುಕೊಳ್ಳಲಿದ್ದೀರಿ. ವ್ಯಾಪಾರಿಗಳು, ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ.

ಕನ್ಯಾ: ಎಷ್ಟೇ ಹಣ ಸಂಪಾದನೆ ಮಾಡಿದರೂ ಅದಕ್ಕೆ ತಕ್ಕ ನೆಮ್ಮದಿ ಇಲ್ಲ ಎನಿಸೀತು. ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ತುಲಾ: ದೈವಾನುಕೂಲದಿಂದ ಇಂದು ನೀವು ಕೈಗೆತ್ತಿಕೊಳ್ಳಲಿರುವ ಕೆಲಸಗಳು ಸುಸ್ರೂತ್ರವಾಗಿ ನಡೆಯಲಿದೆ. ಆತ್ಮೀಯರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೂರದ ವ್ಯವಹಾರಗಳಿಂದ ಲಾಭವಾಗುವ ಸಾಧ‍್ಯತೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಒಳ್ಳೆಯ ಮಾತು, ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೀರ್ತಿ ಸಂಪಾದಿಸುವ ಯೋಗ. ಸಹೋದ್ಯೋಗಿಗಳ ಪ್ರೋತ್ಸಾಹ ಕಂಡುಬರಲಿದೆ.

ಮಕರ: ನಿಮ್ಮ ಋಣಾತ್ಮಕ ಅಂಶಗಳು ಇತರರಿಗೆ ಕಾಣದಂತೆ ಮರೆ ಮಾಚಲು ಪ್ರಯತ್ನಿಸುವಿರಿ. ನೆರೆಹೊರೆಯವರೊಂದಿಗೆ ಅಗನತ್ಯ ಸಂಘರ್ಷ ಬೇಡ. ವಾಹನ, ಭೂಮಿ ಖರೀದಿಗೆ ಕೆಲವು ಸಮಯ ಕಾಯುವುದು ಉತ್ತಮ.

ಕುಂಭ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ಬೇಡ. ಉದ್ಯೋಗ ಕ್ಷೇತ್ರದಲ್ಲಿ ವಿಶೇಷಾಧಿಕಾರ ನಿಮ್ಮದಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮೀನ: ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆತುರದ ನಿರ್ಧಾರದಿಂದ ಸಂಕಷ್ಟಕ್ಕೊಳಗಾಗದಂತೆ ಎಚ್ಚರಿಕೆ ವಹಿಸಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments