Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 5 ಫೆಬ್ರವರಿ 2023 (07:40 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹಳ ದಿನಗಳ ನಂತರ ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.

ವೃಷಭ: ಮಕ್ಕಳ ಖುಷಿಗಾಗಿ ಕಿರು ಪ್ರವಾಸ ಮಾಡಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ಕಾರ್ಯರಂಗದಲ್ಲಿ ಘರ್ಷಣೆಗೆ ಅವಕಾಶ ಕೊಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೀರಿ.

ಕರ್ಕಟಕ: ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿಯಿರಲಿದೆ. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ನಿಮ್ಮ ಗುಟ್ಟು ಇತರರ ಮುಂದೆ ಬಯಾಗಲಿದೆ. ಸಂಗಾತಿಯೊಂದಿಗೆ ಮಾತನಾಡುವಾಗ ಸಹನೆಯಿರಲಿ.

ಸಿಂಹ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟ ಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ನಿಮ್ಮ ಒಳ್ಳೆಯತನವನ್ನು ಇತರರು ದುರುಪಯೋಗಪಡಿಸಿಕೊಳ್ಳಲು ಬಿಡಬೇಡಿ.

ಕನ್ಯಾ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಅಡೆತಡೆಗಳು ಬಂದೀತು. ಪೂರ್ವಾಪರ ವಿಚಾರಿಸದೇ ಯಾವುದೇ ವ್ಯಕ್ತಿಯನ್ನು ನಂಬುವುದು ಒಳ್ಳೆಯದಲ್ಲ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಇದುವರೆಗೆ ಇದ್ದ ಅಡಚಣೆಗಳು ದೂರವಾಗಲಿದೆ.

ತುಲಾ: ಕಾರ್ಯರಂಗದಲ್ಲಿ ವಿಶೇಷಾಧಿಕಾರ ನಿಮಗೆ ಸಿಗುವುದು. ಜವಾಬ್ಧಾರಿಗಳನ್ನು ಸರಿಯಾಗಿ ನಿಭಾಯಿಸಲು ಕಲಿಯಬೇಕು. ಮನಸ್ಸಿನಲ್ಲಿ ಏನೇ ಇದ್ದರೂ ಅದನ್ನು ಮುಕ್ತವಾಗಿ ಹೇಳದೇ ಮುಚ್ಚಿಡುವ ಪರಿಸ್ಥಿತಿ.

ವೃಶ್ಚಿಕ: ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ತಲ್ಲೀನತೆ ಕಂಡುಬರಲಿದೆ. ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆಯಿರಲಿದೆ. ಪ್ರಯಾಣದಲ್ಲಿ ಎಚ್ಚರ.

ಧನು: ಎಷ್ಟೇ ಕಾರ್ಯದೊತ್ತಡವಿದ್ದರೂ ತಾಳ್ಮೆ ಕಳೆದುಕೊಳ್ಳುವ ಪ್ರಸಂಗ ಬಾರದಂತೆ ಎಚ್ಚರಿಕೆ ವಹಿಸಿ. ಗುರು ಹಿರಿಯರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ.

ಮಕರ: ನಿಮ್ಮಿಂದಾಗಿ ಮನೆಯ ಸದಸ್ಯರೊಬ್ಬರಿಗೆ ತೊಂದರೆಯಾಗುವ ಸಾಧ್ಯತೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕುಂಭ: ಇನ್ನೊಬ್ಬರಿಗೆ ಲಾಭವಾಗುವ ಕೆಲಸಗಳು ನಿಮ್ಮಿಂದ ನಡೆಯಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಏನೇ ನಿರ್ಧಾರ ತೆಗೆದುಕೊಳ್ಳುವುದಿದ್ದರೂ ಮನಸ್ಸು ನಿಮ್ಮ ಹತೋಟಿಯಲ್ಲಿರಲಿ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments