Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 10 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಕೈ ಹಿಡಿದ ಕೆಲಸಗಳು ಸುಸ್ರೂತ್ರವಾಗಿ ನೆರವೇರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವ ಸಾಧ‍್ಯತೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಶುಭ ದಿನ.

ವೃಷಭ: ನಿಮ್ಮ ಬದುಕಿನಲ್ಲಿ ಹಣಕಾಸಿನ ವಿಚಾರವಾಗಿ ಇದುವರೆಗೆ ಇದ್ದ ಸಂಘರ್ಷಗಳು ದೂರವಾಗುವ ದಿನ. ದೈವಾನುಕೂಲದಿಂದ ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.

ಮಿಥುನ: ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಆತ್ಮೀಯರೊಂದಿಗೆ ಕಾಲ ಕಳೆಯಲು ಮನಸ್ಸು ಹಾತೊರೆಯುವುದು.

ಕರ್ಕಟಕ: ಎಷ್ಟೇ ವ್ಯವಸ್ಥಿತವಾಗಿ ಯೋಜನೆ ಹಾಕಿಕೊಂಡಿದ್ದರೂ ಕಾರ್ಯರೂಪಕ್ಕೆ ಬರುವಾಗ ಕೆಲವೊಂದು ಅಡಚಣೆಗಳು ಬಂದೀತು. ನೆರೆಹೊರೆಯವರ ಸಹಾಯ ಪಡೆಯಲಿದ್ದೀರಿ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಬೇಕಾಗುತ್ತದೆ.

ಸಿಂಹ: ನಿಮ್ಮಲ್ಲಿರುವ ವಿದ್ಯೆಯನ್ನು ಇತರರಿಗೆ ದಾನ ಮಾಡಲಿದ್ದೀರಿ. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಗುರುಹಿರಿಯರ ಆಶೀರ್ವಾದ ಪಡೆದುಕೊಳ್ಳಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕನ್ಯಾ: ಯಾವುದೇ ಕೆಲಸವಾದರೂ ಹಗುರವಾಗಿ ಪರಿಗಣಿಸದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಏಳಿಗೆ ಕಂಡುಬರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಪರರಿಗೆ ಸಹಾಯ ಮಾಡಿದ ತೃಪ್ತಿ ಕಂಡುಬರುವುದು.

ತುಲಾ: ನಿಮ್ಮ ಉದ್ದೇಶ ಎಷ್ಟೇ ಒಳ್ಳೆಯದಾಗಿದ್ದರೂ ಇನ್ನೊಬ್ಬರು ಅದನ್ನು ತಪ್ಪಾಗಿ ಅರ್ಥೈಸುವ ಸಂದರ್ಭಗಳು ಎದುರಾದೀತು. ಮಾತಿನ ಮೇಲೆ ನಿಗಾ ಇರಲಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.

ವೃಶ್ಚಿಕ: ವರಮಾನ ಹೆಚ್ಚಳಕ್ಕೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ವ್ಯಾಪಾರೀ ವರ್ಗದವರು ವಾಕ್ಚತುರತೆಯಿಂದ ಯಶಸ್ಸು ಪಡೆಯುವರು.

ಧನು: ಮನೆಯ ಯಾವುದೇ ವಿಚಾರದಲ್ಲಿ ತೀರ್ಮಾನ ಕೈಗೊಳ್ಳುವ ಮುನ್ನ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ಮಕ್ಕಳಿಂದ ನಿಮ್ಮ ಸಂತೋಷ ವೃದ್ಧಿಯಾಗಲಿದೆ. ಉದ್ಯೋಗ, ವ್ಯವಹಾರದಲ್ಲಿ ಕೀರ್ತಿ ಹೆಚ್ಚಾಗುವುದು.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಕೋರ್ಟು, ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವುದು. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಕುಂಭ: ಎಷ್ಟೇ ಪ್ರಯತ್ನಪಟ್ಟರೂ ಹಳೆಯ ಕಹಿ ನೆನಪುಗಳು ಪದೇ ಪದೇ ನೆನಪಾಗಿ ಮನಸ್ಸಿಗೆ ಘಾಸಿ ಮಾಡೀತು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕೆ ಕೆಲವು ದಿನ ಕಾಯುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಮುಂದಿನ ಸುದ್ದಿ
Show comments