ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 14 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಮ್ಮ ಸಾಮರ್ಥ್ಯ ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ ಪರಿಸ್ಥಿತಿ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳನ್ನು ಮರೆತು ಮುನ್ನಡೆಯಬೇಕಾಗುತ್ತದೆ.

ವೃಷಭ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ನೀವು ಇಷ್ಟಪಡುವ ವ್ಯಕ್ತಿಯೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭದಾಯಕ ದಿನವಾಗಿರಲಿದೆ. ಚಿಂತೆ ಬೇಡ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಧನಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆಯೂ ಚಿಂತನೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಯಾವುದೇ ಕೆಲಸಕ್ಕೆ ಮುನ್ನ ಪೂರ್ವಾಪರ ತಿಳಿದು ಮುಂದುವರಿಯುವುದು ಉತ್ತಮ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನಿಮ್ಮ ಹಿಂದಿನ ಸಾಲಗಳು ಪಾವತಿಯಾಗಲಿದೆ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಆಪ್ತರಿಂದಲೇ ತೊಂದರೆಗಳು ಎದುರಾದೀತು. ಮೇಲಧಿಕಾರಿಗಳ ಸಹಾಯ ಪಡೆಯಲಿದ್ದೀರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ದೂರದ ವ್ಯವಹಾರಗಳಿಂದ ಲಾಭವಾದೀತು.

ತುಲಾ: ಆಸ್ತಿ ವಿಚಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿಯಾದೀತು. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ದೈವಾನುಗ್ರಹದಿಂದ ಇಂದು ನೀವು ಕೈಗೊಳ್ಳುವ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಸನ್ಮಿತ್ರರ ಸಹಕಾರದಿಂದ ಕಾರ್ಯರಂಗದಲ್ಲಿ ಸಮಸ್ಯೆಗಳು ನಿವಾರಣೆಯಾಗಲಿವೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಧನು: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರುವುದು. ಚಿಂತೆ ಬೇಡ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಾಕ್ಚತುರತೆಯೇ ಉಪಯೋಗಕ್ಕೆ ಬರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅಜಾಗರೂಕತೆ ತೋರಿದರೆ ನಷ್ಟವಾದೀತು.

ಕುಂಭ: ಕೌಟುಂಬಿಕವಾಗಿ ಸಂತೋಷದಾಯಕ ದಿನವಾಗಿರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬಂದೀತು. ದಿನದಂತ್ಯಕ್ಕೆ ಶುಭ ಸುದ್ದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

2026 ರಲ್ಲಿ ದ್ವಾದಶ ರಾಶಿಯವರಿಗೆ ಹಣಕಾಸಿನ ತೊಂದರೆ ಬರುತ್ತಾ, ಇಲ್ಲಿದೆ ವಿವರ

ಶುಕ್ರವಾರ ಓದಬೇಕಾದ ಲಕ್ಷ್ಮೀ ಮಂತ್ರ

ದ್ವಾದಶ ರಾಶಿಯವರಿಗೆ 2026 ರಲ್ಲಿ ಪ್ರೇಮ ಸಂಬಂಧದ ಭವಿಷ್ಯ ಹೇಗಿರಲಿದೆ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments