Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 6 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಠಮಾರೀತನ ಮನೋಭಾವ ಬಿಟ್ಟು ಶ್ರಮವಹಿಸಿ ಕೆಲಸ ಮಾಡಿದರೆ ಯಶಸ್ಸು ಸಾಧ‍್ಯ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಾಂಸಾರಿಕವಾಗಿ ಕೊಂಚ ಸಮಾಧಾನದ ದಿನವಾಗಿರಲಿದೆ.

ವೃಷಭ: ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆಯಾದೀತು. ಸಂಗಾತಿಯೊಂದಿಗೆ ಅನಗತ್ಯ ಘರ್ಷಣೆ ಬೇಡ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಹಿರಿಯರ ಅಭಿಪ್ರಾಯ ಆಲಿಸಿ.

ಮಿಥುನ: ವ್ಯವಹಾರದಲ್ಲಿ ನೀವು ಪಡುವ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲವೆಂಬ ಬೇಸರ ಕಾಡೀತು. ಉದ್ಯೋಗ ಸಂಬಂಧವಾಗಿ ಪರವೂರಿಗೆ ಸಂಚರಿಸಬೇಕಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕರ್ಕಟಕ: ಔದ್ಯೋಗಿಕವಾಗಿ ಮುಂಬಡ್ತಿ ಪಡೆಯುವ ನಿಮ್ಮ ಕನಸಿಗೆ ಯಶಸ್ಸು ಸಿಗಲಿದೆ. ವ್ಯಾವಹಾರಿಕವಾಗಿ ಪಾರದರ್ಶತೆಗೆ ಒತ್ತು ನೀಡಿ. ಸಂಗಾತಿಯೊಂದಿಗೆ ಮುಚ್ಚು ಮರೆ ಬೇಡ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಸಿಂಹ: ಹಿಂದೆ ಮಾಡಿದ್ದ ತಪ್ಪುಗಳಿಗೆ ಪ್ರಾಯಶ್ಚಿತ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳು ಓದಿನಲ್ಲಿ ಏಕಾಗ್ರತೆಯ ಕೊರತೆ ಅನುಭವಿಸಲಿದ್ದಾರೆ. ಯಂತ್ರೋಪಕರಣಗಳಿಂದ ತೊಂದರೆಯಾಗುವ ಸಾಧ್ಯತೆ. ಎಚ್ಚರಿಕೆ ಅಗತ್ಯ.

ಕನ್ಯಾ: ನಿಮ್ಮ ಉದಾರ ಮನೋಭಾವದಿಂದ ಕೆಲವೊಂದನ್ನು ಕಳೆದುಕೊಳ್ಳುವ ಪರಿಸ್ಥಿತಿ ಬಂದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು.

ತುಲಾ: ಹೊಸ ಜನರ ಭೇಟಿ ಮಾಡಲಿದ್ದು, ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ. ಉದ್ಯಮಿಗಳಿಗೆ ಮುನ್ನಡೆಯ ಯೋಗವಿದೆ. ಹೊಸ ಕೆಲಸಕ್ಕೆ ಕೈ ಹಾಕಲು ಇದು ಸಕಾಲ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ಉನ್ನತ ವ್ಯಾಸಂಗಕ್ಕೆ ಪ್ರಯತ್ನಪಡುತ್ತಿದ್ದರೆ ಯಶಸ್ಸು ಸಿಗಲಿದೆ. ಪಾಲುದಾರಿಕಾ ವ್ಯವಹಾರದಲ್ಲಿ ಮುನ್ನಡೆ ಕಂಡುಬಂದೀತು. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ಧನು: ಮನೆಯಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಮನಸ್ಥಿತಿಯಿರಲಿ. ವಿದ್ಯಾರ್ಥಿಗಳಿಗೆ ಓದಿನ ಒತ್ತಡವಿರಲಿದೆ. ಪರರ ಕಾರ್ಯದಲ್ಲಿ ಸಹಭಾಗಿಗಳಾಗಲಿದ್ದೀರಿ. ತಾಳ್ಮೆಯಿರಲಿ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಅಧ್ಯಯನಶೀಲರಿಗೆ ಅಡೆತಡೆಗಳು ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಸ್ವಯಂ ವ್ಯವಹಾರ ಮಾಡುವವರಿಗೆ ಉನ್ನತಿಯ ಯೋಗ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ‍್ಳಲಿದ್ದೀರಿ. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಸರಿಯಾಗಿ ಪರಾಮರ್ಶಿಸಿ ಮುನ್ನಡೆಯಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೇರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಕುಟುಂಬ ಸದಸ್ಯರ ಅಭಿಪ್ರಾಯಗಳಿಗೆ ಬೆಲೆಕೊಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?