Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 6 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಠಮಾರೀತನ ಮನೋಭಾವ ಬಿಟ್ಟು ಶ್ರಮವಹಿಸಿ ಕೆಲಸ ಮಾಡಿದರೆ ಯಶಸ್ಸು ಸಾಧ‍್ಯ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಾಂಸಾರಿಕವಾಗಿ ಕೊಂಚ ಸಮಾಧಾನದ ದಿನವಾಗಿರಲಿದೆ.

ವೃಷಭ: ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆಯಾದೀತು. ಸಂಗಾತಿಯೊಂದಿಗೆ ಅನಗತ್ಯ ಘರ್ಷಣೆ ಬೇಡ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಹಿರಿಯರ ಅಭಿಪ್ರಾಯ ಆಲಿಸಿ.

ಮಿಥುನ: ವ್ಯವಹಾರದಲ್ಲಿ ನೀವು ಪಡುವ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲವೆಂಬ ಬೇಸರ ಕಾಡೀತು. ಉದ್ಯೋಗ ಸಂಬಂಧವಾಗಿ ಪರವೂರಿಗೆ ಸಂಚರಿಸಬೇಕಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕರ್ಕಟಕ: ಔದ್ಯೋಗಿಕವಾಗಿ ಮುಂಬಡ್ತಿ ಪಡೆಯುವ ನಿಮ್ಮ ಕನಸಿಗೆ ಯಶಸ್ಸು ಸಿಗಲಿದೆ. ವ್ಯಾವಹಾರಿಕವಾಗಿ ಪಾರದರ್ಶತೆಗೆ ಒತ್ತು ನೀಡಿ. ಸಂಗಾತಿಯೊಂದಿಗೆ ಮುಚ್ಚು ಮರೆ ಬೇಡ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಸಿಂಹ: ಹಿಂದೆ ಮಾಡಿದ್ದ ತಪ್ಪುಗಳಿಗೆ ಪ್ರಾಯಶ್ಚಿತ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳು ಓದಿನಲ್ಲಿ ಏಕಾಗ್ರತೆಯ ಕೊರತೆ ಅನುಭವಿಸಲಿದ್ದಾರೆ. ಯಂತ್ರೋಪಕರಣಗಳಿಂದ ತೊಂದರೆಯಾಗುವ ಸಾಧ್ಯತೆ. ಎಚ್ಚರಿಕೆ ಅಗತ್ಯ.

ಕನ್ಯಾ: ನಿಮ್ಮ ಉದಾರ ಮನೋಭಾವದಿಂದ ಕೆಲವೊಂದನ್ನು ಕಳೆದುಕೊಳ್ಳುವ ಪರಿಸ್ಥಿತಿ ಬಂದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು.

ತುಲಾ: ಹೊಸ ಜನರ ಭೇಟಿ ಮಾಡಲಿದ್ದು, ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ. ಉದ್ಯಮಿಗಳಿಗೆ ಮುನ್ನಡೆಯ ಯೋಗವಿದೆ. ಹೊಸ ಕೆಲಸಕ್ಕೆ ಕೈ ಹಾಕಲು ಇದು ಸಕಾಲ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ಉನ್ನತ ವ್ಯಾಸಂಗಕ್ಕೆ ಪ್ರಯತ್ನಪಡುತ್ತಿದ್ದರೆ ಯಶಸ್ಸು ಸಿಗಲಿದೆ. ಪಾಲುದಾರಿಕಾ ವ್ಯವಹಾರದಲ್ಲಿ ಮುನ್ನಡೆ ಕಂಡುಬಂದೀತು. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ಧನು: ಮನೆಯಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಮನಸ್ಥಿತಿಯಿರಲಿ. ವಿದ್ಯಾರ್ಥಿಗಳಿಗೆ ಓದಿನ ಒತ್ತಡವಿರಲಿದೆ. ಪರರ ಕಾರ್ಯದಲ್ಲಿ ಸಹಭಾಗಿಗಳಾಗಲಿದ್ದೀರಿ. ತಾಳ್ಮೆಯಿರಲಿ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಅಧ್ಯಯನಶೀಲರಿಗೆ ಅಡೆತಡೆಗಳು ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಸ್ವಯಂ ವ್ಯವಹಾರ ಮಾಡುವವರಿಗೆ ಉನ್ನತಿಯ ಯೋಗ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ‍್ಳಲಿದ್ದೀರಿ. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಸರಿಯಾಗಿ ಪರಾಮರ್ಶಿಸಿ ಮುನ್ನಡೆಯಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೇರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಕುಟುಂಬ ಸದಸ್ಯರ ಅಭಿಪ್ರಾಯಗಳಿಗೆ ಬೆಲೆಕೊಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಮುಂದಿನ ಸುದ್ದಿ
Show comments