Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 8 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಜೊತೆಗೂ ಕೀರ್ತಿಯೂ ಸಂಪಾದಿಸಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಾಂಸಾರಿಕವಾಗಿ ನಿಮ್ಮ ಅಧಿಕಾರಯುತ ಧೋರಣೆ ಇತರರಿಗೆ ಇಷ್ಟವಾಗದು.

ವೃಷಭ: ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸಿಗೆ ನೆಮ್ಮದಿ ಪಡೆಯಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು.

ಮಿಥುನ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಕಷ್ಟವಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಕರ್ಕಟಕ: ಸಾಂಸಾರಿಕವಾಗಿ ಇತರ ಸದಸ್ಯರ ಕಷ್ಟಗಳಲ್ಲಿ ಪಾಲುದಾರರಾಗಲಿದ್ದೀರಿ. ಕಾರ್ಯರಂಗದಲ್ಲಿ ನಿಮ್ಮ ವಿಶ್ವಾಸಕ್ಕೆ ಧಕ್ಕೆಯಾಗುವಂತಹ ಘಟನೆಗಳಾದೀತು. ದೇವತಾ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಸಿಂಹ: ಇನ್ನೊಬ್ಬರಿಗೆ ಸಹಾಯ ಮಾಡುವ ಮುನ್ನ ಪೂರ್ಪಾವರ ತಿಳಿದು ಮುಂದುವರಿಯಿರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಸರಾಕರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ.

ಕನ್ಯಾ: ಆಪ್ತರಿಗೆ ಹಣಕಾಸಿನ ಸಹಾಯ ಮಾಡಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಖುಷಿ ನೀಡಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ.

ತುಲಾ: ವೈಯಕ್ತಿಕ ಜೀವನದಲ್ಲಿ ಆಗುವ ಬದಲಾವಣೆಗಳಿಗೆ ಮಾನಸಿಕವಾಗಿ ಸಿದ್ಧರಾಗಬೇಕಾಗುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುವುದು.

ವೃಶ್ಚಿಕ: ಮನಸ್ಸಿಗೆ ಹಿಡಿಸಿದ ವ್ಯಕ್ತಿಗಳ ಜೊತೆ ಸಂಬಂಧ ಗಟ್ಟಿಗೊಳಿಸಲಿದ್ದೀರಿ. ಉದ್ಯೋಗ ನಿಮಿತ್ತ ಸಣ್ಣ ಪ್ರಯಾಣ ಮಾಡಬೇಕಾಗಿ ಬಂದೀತು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಚಿಂತೆ ಬೇಡ.

ಧನು: ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸಹೋದ್ಯೋಗಿಗಳಿಂದ ಸಹಕಾರ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವುಂಟಾದೀತು. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಅವಿವಾಹಿತರಿಗೆ ವಿವಾಹಕ್ಕೆ ವಿಘ್ನ ಪರಿಹಾರಕ್ಕೆ ದೇವರ ಮೊರೆ ಹೋಗುವುದು ಉತ್ತಮ.

ಕುಂಭ: ಕಟ್ಟಡ ಕಾಮಗಾರಿ ಕೆಲಸಗಳು ಸಂಪೂರ್ಣವಾದ ತೃಪ್ತಿ ನಿಮ್ಮದಾಗುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಯೋಗ. ತಾಳ್ಮೆ, ಸಂಯಮವಿರಲಿ.

ಮೀನ: ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಮುನ್ನಡೆಯಿರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ದೇವಿ ಚಂದ್ರಘಂಟಾ ಮಂತ್ರ ಓದುವುದರಿಂದ ನಿಮಗೆ ಈ ಫಲಗಳು ಸಿಗುತ್ತವೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿ ದೇವನ ಈ ಮಂತ್ರಗಳನ್ನು ಪಠಿಸಿದರೆ ಶನಿ ದೋಷ ನಿವಾರಣೆಯಾಗುವುದು

ಮುಂದಿನ ಸುದ್ದಿ
Show comments