Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 9 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅತಿಯಾಗಿ ಇನ್ನೊಬ್ಬರ ಮೇಲಿಟ್ಟಿದ್ದ ನಂಬಿಕೆಯಿಂದ ನೋವು ಅನುಭವಿಸುವ ಸ್ಥಿತಿ ಬಂದೀತು. ಮೇಲಧಿಕಾರಿಗಳೊಂದಿಗೆ ವಾದ,ವಿವಾದವಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ.

ವೃಷಭ: ಬೇರೆಯವರು ನಿಮ್ಮ ತಪ್ಪಿನ ಬಗ್ಗೆ ಹೇಳಿದಾಗ ಕಿರಿ ಕಿರಿಯಾಗಿ ವಾದ ಮಾಡಲಿದ್ದೀರಿ. ಮಕ್ಕಳಿಂದ ಸಂತೋಷ, ನೆಮ್ಮದಿ ಸಿಗಲಿದೆ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದುಂದು ವೆಚ್ಚ ಬೇಡ.

ಮಿಥುನ: ಉದ್ಯೋಗ ಸಂಬಂಧವಾದ ವಿಚಾರಗಳು ನಿಮ್ಮ ಮನಸ್ಸಿನ ಚಿಂತೆ ಹೆಚ್ಚಿಸಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ನಿರುದ್ಯೋಗಿಗಳಿಗೆ ನಿರ್ಣಾಯಕ ದಿನ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ವ್ಯವಹಾರಗಳಲ್ಲಿ ಇದುವರೆಗೆ ಇದ್ದ ಅಡ್ಡಿ ಆತಂಕಗಳು ನಿವಾರಣೆಯಾಗಲಿವೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.

ಸಿಂಹ: ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬ ಸದಸ್ಯರ ಸಹಕಾರ, ಸಾಥ್ ಸಿಗುವುದು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ಕನ್ಯಾ: ಮನಸ್ಸಿಗೆ ಹಿಡಿಸಿದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯ  ಚಿಂತೆಗೆ ಕಾರಣವಾದೀತು. ಸಂಗಾತಿಯೊಂದಿಗೆ ಹೊಂದಾಣಿಕೆಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ತುಲಾ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಪರಾಮರ್ಶಿಸಿ ಮುಂದುವರಿಯಿರಿ. ಆಸ್ತಿ ವಿಚಾರಗಳ ವಿವಾದ ಪರಿಹಾರಕ್ಕೆ ಹಿರಿಯರ ಸಲಹೆ ಪಡೆಯಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಲಾಭವಿಲ್ಲದಿದ್ದರೂ ನಷ್ಟವಂತೂ ಆಗದು. ಸಂಗಾತಿಯ ಸಮಯೋಚಿತ ಸಲಹೆ ಉಪಯೋಗಕ್ಕೆ ಬರಲಿದೆ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ಧನು: ಸಂತಾನಹೀನ ದಂಪತಿ ದೇವರ ಮೊರೆ ಹೋಗಲಿದ್ದೀರಿ. ನಿರುದ್ಯೋಗಿಗಳಿಗೆ ಯೋಗ್ಯತೆಗೆ ಅನುಸಾರವಾದ ಉದ್ಯೋಗ ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಕಟ್ಟು ನಿಟ್ಟು ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರುವುದು. ದೈಹಿಕ ಆರೋಗ್ಯದಲ್ಲಿ ಸುಧಾರಣೆ.

ಕುಂಭ: ಅಂದುಕೊಂಡ ಕೆಲಸ ನಿಗದಿತ ಸಮಯಕ್ಕೆ ಪೂರ್ತಿ ಮಾಡಲಾಗದೇ ಕಿರಿ ಕಿರಿ ಅನುಭವಿಸಲಿದ್ದೀರಿ. ಬಹಳ ದಿನಗಳ ನಂತರ ಆಪ್ತ ಮಿತ್ರರನ್ನು ಭೇಟಿಯಾಗಿ ಮನಸ್ಸಿಗೆ ಸಂತೋಷವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಪಾಲುದಾರಿಕಾ ಕ್ಷೇತ್ರದಲ್ಲಿ ವ್ಯವಹಾರ ಮಾಡುವವರಿಗೆ ಕೆಲವೊಂದು ಅಡ್ಡಿ ಆತಂಕಗಳು ಎದುರಾದೀತು. ತೊಂದರೆಗಳು ಬಂದರೂ ಸಮಯೋಚಿತವಾಗಿ ಪರಿಹಾರವೂ ಸಿಗಲಿದೆ. ಅನಗತ್ಯ ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?