Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 17 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿಂದೆ ಬೇಡವೆಂದು ಬಿಟ್ಟಿದ್ದ ವಿಚಾರಗಳು ಮತ್ತೆ ನಿಮ್ಮನ್ನು ಕಾಡಲಿದೆ. ಸಮಸ್ಯೆಗಳನ್ನು ಬಂದ ಹಾಗೇ ಸ್ವೀಕರಿಸಲು ಕಲಿಯಬೇಕಾಗುತ್ತದೆ. ಮಕ್ಕಳು ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ಮುಂದುವರಿಸಬೇಕಾಗುತ್ತದೆ.

ಮಿಥುನ: ನಿರುದ್ಯೋಗಿಗಳಿಗೆ ವಿದೇಶದಲ್ಲಿ ಉದ್ಯೋಗಾವಕಾಶಗಳ ಸಾಧ್ಯತೆ. ವಿದ್ಯಾರ್ಥಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ಸಿಂಹ: ಹೊಸದಾಗಿ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದವರಿಗೆ ಮುನ್ನಡೆಯ ಯೋಗ. ನಿರುದ್ಯೋಗಿಗಳ ಉದ್ಯೋಗ ಬೇಟೆ ಪ್ರಯತ್ನಕ್ಕೆ ಹಿನ್ನಡೆಯಾದೀತು. ಆಹಾರ ಸೇವನೆ ವಿಚಾರದಲ್ಲಿ ಕಾಳಜಿ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ನಿಮ್ಮ ಮಾತಿನಿಂದಲೇ ಇತರರಿಗೆ ಮೋಡಿ ಮಾಡಲಿದ್ದೀರಿ. ವ್ಯವಹಾರ  ಚತುರತೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.

ತುಲಾ: ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಆಪ್ತೇಷ್ಟರನ್ನು ಭೇಟಿಯಾಗುವ ಯೋಗ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾದೀತು.

ವೃಶ್ಚಿಕ: ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಕೈ ಹಾಕಿದ್ದರೆ ಅನಗತ್ಯ ಖರ್ಚು ವೆಚ್ಚಗಳಾಗುವ ಸಾಧ‍್ಯತೆ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಆಪ್ತರ ಸಲಹೆ ಪಾಲಿಸುವುದು ಉತ್ತಮ.

ಧನು: ಬೇರೆಯವರು ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ನಿಮ್ಮ ಕೆಲಸಗಳು ನಿಮಗೇ ನೆಮ್ಮದಿ ಕೊಡಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಕಿರು ಓಡಾಟ ಸಾಧ‍್ಯತೆ.

ಮಕರ: ಅತಿಯಾದ ಧಾರಾಳತನ, ದಾನ ಧರ್ಮಾದಿಗಳು ಮುಂದೆ ನಿಮಗೇ ತೊಂದರೆ ತಂದೀತು. ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಚರ್ಚೆಗಳಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ. ತಾಳ್ಮೆ ಅಗತ್ಯ.

ಕುಂಭ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ದಾಂಪತ್ಯ ಸುಖಕ್ಕೆ ತೊಂದರೆಯಾಗದು. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವರ್ತಿಸಿ. ಆಹಾರೋದ್ಯಮಿಗಳಿಗೆ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆದಾಯ  ವೃದ್ಧಿಗೆ ನಾನಾ ದಾರಿಗಳನ್ನು ಕಂಡುಕೊಳ್ಳಬೇಕಾಗುತ್ತದೆ.ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments