ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 24 ಮಾರ್ಚ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ತಾಳ್ಮೆಯಿಂದ ನಡೆದುಕೊಳ್ಳಿ. ಯಾವುದೇ ವಿಚಾರವಾದರೂ ತಲ್ಲೀನತೆಯಿಂದ ತೊಡಗಿಸಿಕೊಳ್ಳಲಿದ್ದೀರಿ. ಹಿರಿಯರಿಗೆ ಸತ್ಕರ್ಮಗಳಲ್ಲಿ ಭಾಗಿಯಾದ ಸಂತೋಷ ಸಿಗುವುದು.

ವೃಷಭ: ಬಯಸದೇ ಬಂದ ಭಾಗ್ಯ ನಿಮ್ಮ ಜೀವನದ ಸಂತೋಷ ಹೆಚ್ಚಿಸಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಬೇಕಾಗುತ್ತದೆ.

ಮಿಥುನ: ಕುಟುಂಬ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ಅಧಿಕಾರಿಗಳಿಂದ ಮೆಚ್ಚುಗೆ.

ಕರ್ಕಟಕ: ಕುಟುಂಬದವರ ಕ್ಷೇಮಕ್ಕಾಗಿ ಕೆಲವು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯಿರಲಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅನಗತ್ಯ ಚಿಂತೆ ಬೇಡ.

ಸಿಂಹ: ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿಬರುವುದರಿಂದ ಸಂಭಾವ್ಯ ಕಷ್ಟಗಳಿಂದ ಪಾರಾಗಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗವಿದೆ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕನ್ಯಾ: ನಿಮ್ಮ ಅನುಕೂಲಕ್ಕಾಗಿ ನಿಮ್ಮದೇ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗ.

ತುಲಾ: ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದೀರಿ. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಮಕ್ಕಳಿಗೆ ಅಪಾಯವಾಗದಂತೆ ನೋಡಿಕೊಳ್ಳಿ.

ವೃಶ್ಚಿಕ: ಪರರ ಹಿತ ಬಯಸುವ ನಿಮಗೆ ನಿಮ್ಮ ಬಗ್ಗೆ ಯೋಚಿಸಲೂ ಸಮಯವಿಲ್ಲದಂತಹ ಪರಿಸ್ಥಿತಿಯಾದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಧನು: ಸರಕಾರೀ ಕೆಲಸಗಳಿಗಾಗಿ ಖರ್ಚು ವೆಚ್ಚಗಳಾದೀತು. ಭೂಮಿ ಪರಭಾರೆ ವಿಚಾರದಲ್ಲಿ ಮುನ್ನಡೆ. ಹೊಸ ಕೆಲಸಗಳಿಗೆ ಕೈ ಹಾಕಲು ಶುಭ ದಿನ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಪಾಲುದಾರಿಕಾ ವ್ಯವಹಾರದಲ್ಲಿ ನಿವ್ವಳ ಲಾಭ ಕಂಡುಬರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಬೇಕಾಗುತ್ತದೆ. ಅನಗತ್ಯ ಚಿಂತೆ ಬೇಡ.

ಕುಂಭ: ಸಭೆ ಸಮಾರಂಭಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಮೀನ: ಹಿರಿಯರಿಂದ ಬಂದ ಬಳವಳಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ‍್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಕೊಟ್ಟ ಮಾತಿಗೆ ಬದ್ಧರಾಗಿ ನಡೆದುಕೊಳ್ಳಬೇಕಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಮುಂದಿನ ಸುದ್ದಿ
Show comments