Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 12 ಏಪ್ರಿಲ್ 2023 (07:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ದೂರ ಪ್ರಯಾನಕ್ಕೆ ಯೋಜನೆ ರೂಪಿಸಲಿದ್ದೀರಿ. ನಿಮ್ಮ ಬಹುದಿನಗಳ ಬೇಡಿಕೆಯ ವಸ್ತು ಖರೀದಿಸಲು ಖರ್ಚು ವೆಚ್ಚವಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಘನತೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಪೂರ್ವಾಪರ ತಿಳಿದು ಇತರರಿಗೆ ಸಹಾಯ ಮಾಡಿ. ವಿಶ್ವಾಸಘಾತುಕರ ಬಗ್ಗೆ ಎಚ್ಚರವಾಗಿರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ನಿಮ್ಮ ಮಾತು ಇತರರಿಗೆ ಕಿರಿ ಕಿರಿಯಾಗದಂತೆ ಎಚ್ಚರಿಕೆ ವಹಿಸಿ. ನೆರೆಹೊರೆಯವರ ಕಷ್ಟಗಳಲ್ಲಿ ಭಾಗಿಯಾಗಲಿದ್ದೀರಿ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ ಹೆಚ್ಚಾಗಲಿದೆ. ಕೆಳ ಹಂತದ ನೌಕರರಿಗೆ ಮುಂಬಡ್ತಿ ಯೋಗ. ವಿಶೇಷ ವ್ಯಕ್ತಿಗಳು ನಿಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ದೂರದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಾಯ ಪಡೆಯಬೇಕಾಗುತ್ತದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು. ಅನಗತ್ಯ ಚಿಂತೆ ಬೇಡ.

ತುಲಾ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಮನರಂಜನಾ ವೃತ್ತಿಯಲ್ಲಿರುವವರಿಗೆ ಮುನ್ನಡೆ. ಪಾಲುದಾರಿಕಾ ಕ್ಷೇತ್ರದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ.

ವೃಶ್ಚಿಕ: ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಉಂಟಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಸಾಕು ಪ್ರಾಣಿಗಳಿಂದ ಅಪಾಯವಾಗುವ ಸಾಧ‍್ಯತೆ. ಎಚ್ಚರಿಕೆಯಿರಲಿ.

ಧನು: ಪರರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ವಿಶೇಷ ಆಸಕ್ತಿ ಕಂಡುಬಂದೀತು. ಸಮಸ್ಯೆಗಳಿಗೆ ಕ್ರಿಯಾತ್ಮಕವಾಗಿ ಪರಿಹಾರ ಕಂಡುಕೊಳ‍್ಳಲಿದ್ದೀರಿ.

ಮಕರ: ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ಕುಟುಂಬದವರೊಂದಿಗೆ ಪರಾಮರ್ಶಿಸಿ ಮುನ್ನಡೆಯಿರಿ. ಸಹೋದ್ಯೋಗಿಗಳಿಂದ ಪ್ರೋತ್ಸಾಹ ಕಂಡುಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ.

ಕುಂಭ: ನಿಮ್ಮ ಒಳ್ಳೆಯತನ ದುರುಪಯೋಗವಾಗುವ ಭೀತಿಯಿದೆ. ಎಚ್ಚರಿಕೆಯಿಂದಿರಬೇಕು. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮೀನ: ಕುಟುಂಬದ ಅಭಿವೃದ್ಧಿಗಾಗಿ ಕೆಲವೊಂದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಪ್ರಯಾಸಪಡಬೇಕಾದೀತು. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಯಶಸ್ಸು. ಬಹುಜನರ ಒಡನಾಟ ನಡೆಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕುಜ ದೋಷವಿದ್ದವರು ಇಂದು ಈ ಅಷ್ಟೋತ್ತರ ಪಠಿಸಿ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments