ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 14 ಏಪ್ರಿಲ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವವಿರುತ್ತಾರೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಸಂಗಾತಿಯೊಂದಿಗೆ ನೀವು ಹಂಚಿಕೊಳ್ಳಬೇಕಾದ ವಿಚಾರ ಹಂಚಿಕೊಳ್ಳಲು ಹಿಂಜರಿಯಲಿದ್ದೀರಿ.

ವೃಷಭ: ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಿದ ತೃಪ್ತಿ ನಿಮ್ಮದಾಗಲಿದೆ. ನೆರೆಹೊರೆಯವರ ಜೊತೆ ಸಂಬಂಧ ಸುಧಾರಣೆಯಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ಮೀರಿ ಕೆಲಸಗಳು ಸಿಗಲಿವೆ. ಗುರುಹಿರಿಯರ ಸಲಹೆ ಪಡೆಯುವುದು ಉತ್ತಮ. ವ್ಯಾವಹಾರಿಕವಾಗಿ ನಿಮಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಚಿಂತೆ ಬೇಡ.

ಸಿಂಹ: ಕಾರ್ಯರಂಗದಲ್ಲಿ ನೀವು ಅಂದುಕೊಂಡ ಸ್ಥಾನಕ್ಕೆ ಏರಲು ಅವಕಾಶ ಸಿಗುವುದು. ವಿದ್ಯಾರ್ಥಿಗಳಿಗೆ ಪರಿಶ್ರಮದಾಯಕ ದಿನವಾಗಿರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಉದ್ಯೋಗ, ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ ಕಂಡುಬರಲಿದೆ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ತುಲಾ: ಪ್ರತಿಷ್ಠೆ ಬದಿಗಿಟ್ಟು ಕೆಲಸ ಮಾಡಬೇಕಾಗುತ್ತದೆ. ಮನೆಯಲ್ಲಿ ಸಣ್ಣ ಪುಟ್ಟ ಭಿನ್ನಾಬಿಪ್ರಾಯಗಳು ಸಾಮಾನ್ಯ. ಮಾತಿನ ಮೇಲೆ ನಿಗಾ ಇರಲಿ. ಹೊಸ ವ್ಯಕ್ತಿಗಳನ್ನು ಪರಿಚಯ ಮಾಡಿಕೊಳ್ಳಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾಗುತ್ತಿರುವ ಸಂತೋಷ ನಿಮ್ಮದಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ತಾಳ್ಮೆಯಿರಲಿ.

ಮಕರ: ಮಹಿಳೆಯರಿಗೆ ಅಡುಗೆ ಮನೆ ಕೆಲಸದಲ್ಲಿ ತೊಂದರೆಗಳು ಎದುರಾದೀತು. ಆಸ್ತಿ ವಿವಾದಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ.

ಕುಂಭ: ಸರಕಾರೀ ನೌಕರರಿಗೆ ಸಮಯ ಮಿತಿಯೊಳಗೆ ಕೆಲಸ ಮುಗಿಸುವ ಒತ್ತಡ ಕಂಡುಬರಲಿದೆ. ನಿಮ್ಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ವಿಚಾರಗಳು ನಡೆದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮೀನ: ಕೊಟ್ಟ ಮಾತಿನಂತ ನಡೆದುಕೊಳ್ಳಲು ಪ್ರಯಾಸಪಡಬೇಕಾದೀತು. ಖರೀದಿ ವಿಚಾರದಲ್ಲಿ ಅಡೆತಡೆಗಳು ತೋರಿಬಂದೀತು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಸಾಂಸಾರಿಕ ಸುಖ ಮಧ‍್ಯಮವಾಗಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments