ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 18 ಏಪ್ರಿಲ್ 2023 (06:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಬಹಳ ದಿನಗಳ ನಂತರ ನಿಮ್ಮ ಇಷ್ಟದ ಖಾದ್ಯ ಸವಿಯುವ ಯೋಗ.

ವೃಷಭ: ಹಿರಿಯರಿಗೆ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ತೃಪ್ತಿ. ನಿಮ್ಮ ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಬಹಳ ಓಡಾಟ ನಡೆಸಬೇಕಾದ ದಿನವಿದು. ಬಹುಜನರ ಸಂಪರ್ಕ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ.

ಕರ್ಕಟಕ: ನಿಮ್ಮ ಮನಸ್ಸಿನಲ್ಲಿರುವ ಯೋಚನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ನೆಂಟರಿಷ್ಟರನ್ನು ಭೇಟಿಯಾಗಲಿದ್ದೀರಿ. ಮಕ್ಕಳಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ. ದಾಂಪತ್ಯದಲ್ಲಿ ಸುಖ, ಸಮೃದ್ಧಿಯಿರಲಿದೆ. ಚಿಂತೆ ಬೇಡ.

ಕನ್ಯಾ: ಬಹಳ ದಿನಗಳ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಹಳೆಯ ಮಿತ್ರರ ಭೇಟಿ ಯೋಗ. ಉದ್ಯೋಗದ ನಿಮಿತ್ತ ಪರವೂರಿಗೆ ಸಂಚರಿಸಲಿದ್ದೀರಿ.

ತುಲಾ: ಆತುರದ ನಿರ್ಧಾರದಿಂದ ಅನಾಹುತವಾದೀತು. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಮಾತಿನಲ್ಲೇ ಇತರರನ್ನು ಮೋಡಿ ಮಾಡಲಿದ್ದೀರಿ.

ವೃಶ್ಚಿಕ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಯೋಜನೆ ರೂಪಿಸಿದ್ದರೆ ಕೆಲವು ದಿನ ಮುಂದೂಡುವುದು ಉತ್ತಮ. ವ್ಯಾಪಾರೀ ವರ್ಗದವರಿಗೆ ಅತ್ತ ಲಾಭವೂ ಇಲ್ಲ, ಇತ್ತ ನಷ್ಟವೂ ಇಲ್ಲದ ಪರಿಸ್ಥಿತಿ. ಮಹಿಳೆಯರಿಗೆ ಆರೋಗ್ಯದ ಬಗ್ಗೆ ನಿಗಾ ಅಗತ್ಯ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಯಂತ್ರೋಪಕರಣಗಳಿಂದ ತೊಂದರೆ ಎದುರಾಗುವ ಸಾಧ‍್ಯತೆ. ಮಕ್ಕಳೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ದೇವಾಲಯ ಸಂದರ್ಶನ ಯೋಗವಿದೆ.

ಮಕರ: ನಾನಾ ಚಟುವಟಿಕೆಗಳಿಂದ ಕೂಡಿದ ದಿನ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವ್ಯಾವಹಾರಿಕವಾಗಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಮನೆಯ ಆಗು ಹೋಗುಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರುವುದು. ತಾಳ್ಮೆಯಿರಲಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನಕ್ಕಾಗಿ ಸಂಘರ್ಷ ನಡೆಸಬೇಕಾದೀತು. ಸ್ವಯಂ ವೃತ್ತಿಯವರಿಗೆ ಲಾಭಕರ ದಿನ. ಹೂಡಿಕೆ ವ್ಯವಹಾರಗಳಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಕೃಷಿಕರಿಗೆ ಕೊಡು-ಕೊಳ್ಳುವ ವ್ಯವಹಾರದಿಂದ ಲಾಭ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಶಿವ ಆರತಿ ಸ್ತೋತ್ರವನ್ನು ಓದಿ

ಸೂರ್ಯ ಮಂಡಲ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಶನಿ ಅಷ್ಟೋತ್ತರ ಶತನಾಮ ಸ್ತೋತ್ರ ತಪ್ಪದೇ ಓದಿ

ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರಂ

ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments