Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 8 ಮೇ 2023 (06:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅಧಿಕ ಧನವ್ಯಯವಾಗಲಿರುವ ದಿನವಿಂದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬಂದೀತು. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಉತ್ತಮ ಧನಾಗಮನವಾಗಲಿದ್ದರೂ ಖರ್ಚಿಗೆ ಹಲವು ದಾರಿಗಳಾದೀತು. ಮನೆ, ವಾಹನ ರಿಪೇರಿ ಕೆಲಸಗಳಿಗೆ ಕೈ ಹಾಕಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ನೆರೆಹೊರೆಯವರೊಡನೆ ಸಂಬಂಧ ಸುಧಾರಣೆಯಾಗಲಿದೆ. ಅಧ್ಯಯನ ಪ್ರವೃತ್ತರಿಗೆ ಮುನ್ನಡೆಯ ಯೋಗ.  ಧಾರ್ಮಿಕ ಕೆಲಸಗಳಿಗೆ ನೇತೃತ್ವ ವಹಿಸಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು.

ಕರ್ಕಟಕ: ದೈಹಿಕ, ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಉದ್ಯೋಗ, ವ್ಯವಹಾರದಲ್ಲಿ ಮೇಲಧಿಕಾರಿಗಳಿಂದ ಪ್ರೋತ್ಸಾಹ ಸಿಗುವುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೂರ ಸಂಚಾರ ಮಾಡಲಿದ್ದೀರಿ.

ಸಿಂಹ: ನಿಮ್ಮ ಮಾತಿನಿಂದಲೇ ಇತರರಿಗೆ ಮೋಡಿ ಮಾಡಲಿದ್ದೀರಿ. ಸಕಾಲದಲ್ಲಿ ಸನ್ಮಿತ್ರರ ಸಹಾಯ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ದಾಂಪತ್ಯದಲ್ಲಿ ನೆಮ್ಮದಿ.

ಕನ್ಯಾ: ಸಹೋದರರೊಂದಿಗೆ ಸಂತೋಷದ ವಾರ್ತೆ ಕೇಳಿಬರಲಿದೆ. ದಂಪತಿಗಳಲ್ಲಿ ಪರಸ್ಪರ ತಾಳ್ಮೆ ಅಗತ್ಯ. ಮಕ್ಕಳ ವಿಚಾರದಲ್ಲಿ ಚಿಂತೆಯಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ತುಲಾ: ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ. ನೂತನ ಮಿತ್ರರ ಭೇಟಿಯಾಗಲಿದ್ದೀರಿ.

ವೃಶ್ಚಿಕ: ಮನೆಯಲ್ಲಿ ಸಣ್ಣ ಪುಟ್ಟ ಸಂಘರ್ಷಗಳಾಗುವ ಸಾಧ‍್ಯತೆ. ಸಹೋದರರಿಂದ ಸಂತೋಷದ ವಾರ್ತೆ ಕೇಳಿಬರುವುದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ಧನು: ಜಲೋತ್ಪನ್ನಗಳ ಕ್ರಯ-ವಿಕ್ರಯದಿಂದ ಲಾಭವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಮಕ್ಕಳಿಗೆ ಸಂತೋಷದಾಯಕ ದಿನವಾಗಿರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಕರ: ಮಕ್ಕಳ ಜೀವನದ ಬಗ್ಗೆ ಅನಗತ್ಯ ಚಿಂತೆ ಮಾಡುವುದನ್ನು ಬಿಡಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಯಾತ್ರಾರ್ಥಿಗಳಿಗೆ ಅಡೆತಡೆಗಳು ಕಂಡುಬಂದೀತು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕುಂಭ: ಸರಕಾರೀ ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡ ಕಂಡುಬರಲಿದೆ. ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ದೇವತಾ ಕಾರ್ಯಗಳಿಗೆ ಧನವ್ಯಯವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಾಣಿಜ್ಯೋದ್ಯಮಿಗಳಿಗೆ ಲಾಭಕರ ದಿನವಾಗಿರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?