Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 10 ಮೇ 2023 (06:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿರೀಕ್ಷಿತ ಅದೃಷ್ಟ ಪ್ರಾಪ್ತಿಯಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಖುಷಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಹೊಸ ಕೆಲಸಗಳಿಗೆ ಕೈ ಹಾಕುವ ಆರಂಭಿಕ ಉತ್ಸಾಹ ಕಂಡುಬರಲಿದೆ. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಯೋಗ್ಯ ವಯಸ್ಕರಿಗೆ ಕಂಕಣ ಬಲವಿದೆ.

ಮಿಥುನ: ಕಾರ್ಯರಂಗದಲ್ಲಿ ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವಾಹನ, ಭೂಮಿ ಖರೀದಿಗೆ ಕೆಲವು ದಿನ ಕಾಯುವುದು ಉತ್ತಮ. ಸ್ನೇಹಿತರ ಸಹಾಯ ಒದಗಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸಂಗಾತಿಯ ಕೆಲವೊಂದು ಅಭಿಪ್ರಾಯಗಳು ನಿಮಗೆ ಹಿಡಿಸದೇ ಹೋದೀತು. ಮಹಿಳೆಯರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ‍್ಯತೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ವ್ಯಾಪಾರ, ವಾಣಿಜ್ಯೋದ್ಯಮಿಗಳಿಗೆ ಮುನ್ನಡೆಯ ಯೋಗ. ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ನಿಮ್ಮ ಹಳೆಯ ಬಾಕಿ ಸಂದಾಯವಾಗಲಿದೆ. ಯಂತ್ರೋಪಕರಣಗಳ ರಿಪೇರಿ ಕೆಲಸಗಳಿಗೆ ಖರ್ಚಾಗಲಿದೆ.

ತುಲಾ: ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಅನಿರೀಕ್ಷಿತ ಧನಾಗಮನದಿಂದ ಅಂದುಕೊಂಡ ಕೆಲಸ ಪೂರ್ತಿಯಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದುಂದು ವೆಚ್ಚ ಬೇಡ.

ವೃಶ್ಚಿಕ: ಅಧ್ಯಯನಶೀಲರಿಗೆ, ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಜಯ.

ಧನು: ಬಿಗುಮಾನ ಬಿಟ್ಟು ಆತ್ಮೀಯರೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಕ್ಕಳಿಗೆ ಮನರಂಜನಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಖುಷಿ ಸಿಗುವುದು.

ಮಕರ: ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಕೌಟುಂಬಿಕವಾಗಿ ಪರಸ್ಪರ ಸಹಕಾರವಿರಲಿದೆ. ದಾಂಪತ್ಯ ಸುಖಕ್ಕೆ ಕೊರತೆಯಾಗದು. ನಿರುದ್ಯೋಗಿಗಳಿಗೆ ಪ್ರಯತ್ನ ಮುಂದುವರಿಸಬೇಕಾಗುತ್ತದೆ.

ಕುಂಭ: ಸರಕಾರೀ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಸಂಗಾತಿಯ ಸಲಹೆಗಳು ಪಥ್ಯವಾಗದೇ ಹೋದೀತು. ಮಕ್ಕಳಿಗೆ ಉಡುಗೊರೆಯ ಖುಷಿ ನೀಡಲಿದ್ದೀರಿ. ದೂರದ ವ್ಯವಹಾರಗಳಿಂದ ಧನಾರ್ಜನೆಯಾಗಲಿದೆ.

ಮೀನ: ಜವಾಬ್ಧಾರಿಯುತ ಕೆಲಸಗಳಿಂದ ಜನಮನ್ನಣೆ ಗಳಿಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಜಲೋತ್ಪನ್ನಗಳ ವ್ಯಾಪಾರಸ್ಥರಿಗೆ ಮುನ್ನಡೆ. ಬಂಧು ಮಿತ್ರರಿಂದ ಸಹಕಾರ ಸಿಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?