ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 4 ಜೂನ್ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೆ ಅತಿಯಾಗಿ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವು ತೀರ್ಮಾನ ಕೈಗೊಳ್ಳಲಿದ್ದೀರಿ.

ವೃಷಭ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಗಳು ಕೈ ಹಿಡಿಯಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹಳೆಯ ಬಾಕಿ ತೀರಿಸಲು ಮುಂದಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ.

ಕರ್ಕಟಕ: ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ಕೇಂದ್ರೀಕರಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ.

ಸಿಂಹ: ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಇಷ್ಟ ಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಉದ್ಯೋಗ ಕ್ಷೇತ್ರದ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಸನ್ಮಿತ್ರರ ಸಹವಾಸದಿಂದ ನಿಮಗೆ ಒಳಿತೇ ಆಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ವಿಶೇಷ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ.

ವೃಶ್ಚಿಕ: ಸರಕಾರೀ ವೃತ್ತಿಯಲ್ಲಿರುವವರಿಗೆ ಬಿಡುವಿನ ದಿನ ಖುಷಿ ಸಿಗುವುದು. ಸ್ವಯಂ ವೃತ್ತಿಯವರಿಗೆ ಉನ್ನತಿಯ ಯೋಗ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗುವುದು.

ಧನು: ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಸಿಸಿದರೆ ಉತ್ತಮ. ಪಾಲುದಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಮಕರ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಣಕಾಸಿನ ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಆರೋಗ್ಯದಲ್ಲಿ ಸುಧಾರಣೆ.

ಕುಂಭ: ಭವಿಷ್ಯದ ಬಗ್ಗೆ ಕೆಲವು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮೀನ: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments