ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 6 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಬಡ್ಡಿ ವ್ಯವಹಾರ ಮಾಡುವವರು ಎಚ್ಚರಿಕೆಯಿಂದಿರುವುದು ಮುಖ್ಯ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರೋಗ್ಯದಲ್ಲಿ ಚೇತರಿಕೆಯಿರಲಿದೆ.

ವೃಷಭ: ಕೆಲವು ಮಹತ್ವದ ತೀರ್ಮಾನ ಕೈಗೊಳ್ಳುವ ಸಮಯವಿದು. ನೆರೆಹೊರೆಯವರ ಸಹಾಯ ಪಡೆಯಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ.

ಮಿಥುನ: ಹೊಸದಾಗಿ ಆರಂಭಿಸಿದ್ದ ಕೆಲಸಗಳಿಗೆ ಅಡೆತಡೆಗಳು ಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗುವುದು.

ಕರ್ಕಟಕ: ನಿಮ್ಮನ್ನು ಹೊಗಳಿ ಹೊನ್ನ ಶೂಲಕ್ಕೇರಿಸುವವರ ಬಗ್ಗೆ ಎಚ್ಚರಿಕೆಯಿಂದಿರಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಕಾರ್ಯರಂಗದಲ್ಲಿ ಬೇಡದೇ ಇದ್ದರೂ ಕೆಲವೊಂದು ವ್ಯಕ್ತಿಗಳನ್ನು ಎದುರಿಸಬೇಕಾಗುತ್ತದೆ. ತಾಳ್ಮೆ, ಸಂಯಮ ಅಗತ್ಯ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಪೋಷಕರ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಕಾರ್ಯರಂಗದಲ್ಲಿ ಕಾರ್ಯದೊತ್ತಡ ಕಂಡುಬಂದೀತು.

ತುಲಾ: ಮರೆಯಬೇಕೆಂದರೂ ಕೆಲವೊಂದು ಘಟನೆಗಳು ನಿಮ್ಮನ್ನು ಕಾಡುತ್ತಲೇ ಇರುತ್ತವೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ.

ವೃಶ್ಚಿಕ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಪಾಲು ಬಂಡವಾಳ ಕ್ಷೇತ್ರದಲ್ಲಿ ಪ್ರಗತಿ ಕಂಡುಬರುವುದು. ಯೋಗ್ಯ ವಯಸ್ಕರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಕಾರ್ಯನಿಮಿತ್ತ ಪರರನ್ನು ಆಶ್ರಯಿಸಬೇಕಾದ ಪರಿಸ್ಥಿತಿಯಿರಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರುವುದು.

ಮಕರ: ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಬಹುದಿನಗಳಿಂದ ಬಾಕಿಯಿದ್ದ ದೇವತಾ ಕಾರ್ಯಗಳನ್ನು ಪೂರ್ತಿ ಮಾಡಲಿದ್ಧೀರಿ. ಸಾಲಗಾರರಿಂದ ಸಂದಾಯವಾಗಬೇಕಾದ ಹಣ ಸಂದಾಯವಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಮೆಚ್ಚುಗೆಗೆ ಪಾತ್ರವಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ಮುಂದಿನ ಸುದ್ದಿ
Show comments