Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 10 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಹಣಕಾಸಿನ ವಿಚಾರವಾಗಿ ಆಪ್ತರೊಂದಿಗೆ ಸಂಘರ್ಷವಾಗುವ ಸಾಧ್ಯತೆ. ತಾಳ್ಮೆಯಿರಲಿ.

ವೃಷಭ: ಕಾರ್ಯರಂಗದಲ್ಲಿ ಇನ್ನೂ ಹೆಚ್ಚಿನ ಸಾಧನೆಗೆ ಕ್ರಿಯಾತ್ಮಕವಾಗಿ ಯೋಚನೆ ಮಾಡಬೇಕಾಗುತ್ತದೆ. ಮಾತಿನ ಮೇಲೆ ನಿಗಾ ಇರಲಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ.

ಮಿಥುನ: ಅವಿವಾಹಿತರಿಗೆ ವಿವಾಹಾದಿ ಪ್ರಯತ್ನಗಳಿಗೆ ಅಡ್ಡಿ ಆತಂಕಗಳು ಎದುರಾದೀತು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಬಹಳ ದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಆಪ್ತರನ್ನು ಭೇಟಿಯಾಗುವ ಯೋಗ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ.

ಸಿಂಹ: ವಿಶೇಷ ಅತಿಥಿಗಳು ನಿಮ್ಮ ಮನೆಗೆ ಭೇಟಿ ಕೊಡಲಿದ್ದಾರೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ನಿಮ್ಮ ಅನುಕೂಲಕ್ಕಾಗಿ ಮನೆಯಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ತುಲಾ: ನಿಮ್ಮದಲ್ಲದ ತಪ್ಪಿಗೆ ನಿಮ್ಮನ್ನು ಹೊಣೆಗಾರನಾಗಿ ಮಾಡುವ ಪ್ರಯತ್ನ ಕಂಡುಬಂದೀತು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾಗುತ್ತದೆ. ಪ್ರೇಮಿಗಳಿಗೆ ಮನೆಯವರಿಂದ ಒಪ್ಪಿಗೆ ಸಿಗುವುದು.

ವೃಶ್ಚಿಕ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಪರರನ್ನು ಆಶ್ರಯಿಸುವ ಪರಿಸ್ಥಿತಿಯಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ.

ಧನು: ಮಕ್ಕಳ ಜೀವನದ ಬಗ್ಗೆ ಅತಿಯಾಗಿ ಚಿಂತೆ ಮಾಡುವುದನ್ನು ಬಿಡಿ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಕಂಡುಕೊಳ್ಳಲಿದ್ದಾರೆ. ದಿನದಂತ್ಯಕ್ಕೆ ನೆಮ್ಮದಿ.

ಮಕರ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಹಿಂಜರಿಕೆ ಬೇಡ. ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ತಾಳ್ಮೆ, ಸಂಯಮವಿರಲಿ.

ಕುಂಭ: ವಿದ್ಯಾರ್ಥಿಗಳಿಗೆ ಅದೃಷ್ಟದಾಯಕ ದಿನ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಸಹೋದರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಗುರು ಹಿರಿಯರೊಂದಿಗೆ ತಾಳ್ಮೆಯಿಂದಿರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಮಾತಿನಲ್ಲೇ ಇತರರನ್ನು ಮೋಡಿ ಮಾಡಲಿದ್ದೀರಿ. ಸಂತಾನ ಹೀನ ದಂಪತಿ ದೇವರ ಮೊರೆ ಹೋಗಲಿದ್ದಾರೆ. ಕಾರ್ಯರಂಗದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?