Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 19 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅಗತ್ಯಕ್ಕೆ ತಕ್ಕಂತೆ ನಿಮ್ಮ ಯೋಜನೆಗಳಲ್ಲಿ ಬದಲಾವಣೆ ಮಾಡಿಕೊಳ‍್ಳಲಿದ್ದೀರಿ. ಪ್ರೀತಿ ಪಾತ್ರರಿಂದ ಉಡುಗೊರೆ ಸ್ವೀಕರಿಸಲಿದ್ದೀರಿ. ದೇವತಾನುಗ್ರಹದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ.

ವೃಷಭ: ಆಸ್ತಿ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ನೂತನ ಬಂಧು ಮಿತ್ರರ ಸಮಾಗಮವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.  ಅಧ‍್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ.

ಮಿಥುನ: ಮನೆಯಲ್ಲಿ ಸಣ್ಣ ಪುಟ್ಟ ಮಾರ್ಪಾಡು ಮಾಡಲು ಮುಂದಾಗುವಿರಿ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಕರ್ಕಟಕ: ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುವುದು. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಬಹುದು. ಕ್ರಿಯಾತ್ಮಕಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಮುನ್ನಡೆ.

ಸಿಂಹ: ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ. ಗುರುಹಿರಿಯರ ಪ್ರೋತ್ಸಾಹದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ. ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಗಬಹುದು.

ಕನ್ಯಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಮಕ್ಕಳಿಂದ ನಿಮ್ಮ ಸಂತೋಷ ಇಮ್ಮಡಿಯಾದೀತು. ಕೆಲಸ ಕಾರ್ಯಗಳಲ್ಲಿ ಅಧಿಕ ಓಡಾಟ ನಡೆಸಬೇಕಾಗಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ. ವ್ಯಾಪಾರಿಗಳಿಗೆ ಹಣಕಾಸಿನ ಗಳಿಕೆಗೆ ನಾನಾ ಮಾರ್ಗ ಕಂಡುಬಂದೀತು.

ವೃಶ್ಚಿಕ: ಸ್ವಯಂ ವೃತ್ತಿಯವರಿಗೆ ಹಣಕಾಸಿನ ವಿಚಾರದಲ್ಲಿ ವಂಚನೆಗೊಳಗಾಗುವ ಭೀತಿ. ಆಪ್ತರ ಜೊತೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ನೆರೆಹೊರೆಯವರಿಂದ ಸಹಾಯ ನಿರೀಕ್ಷಿಸಬಹುದು. ತಾಳ್ಮೆಯಿರಲಿ.

ಧನು: ನಿಮ್ಮ ತಪ್ಪನ್ನು ಇತರರ ಮೇಲೆ ಎತ್ತಿಹಾಕುವ ಪ್ರವೃತ್ತಿ ಕಂಡುಬಂದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಕಟ್ಟು ನಿಟ್ಟು ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಹೊಸ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವ ಉತ್ಸಾಹ ಕಂಡುಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ದಾಂಪತ್ಯದಲ್ಲಿ ಸುಖ, ನೆಮ್ಮದಿ ಕಂಡುಬರುವುದು. ಅನಗತ್ಯ ಚಿಂತೆ ಬೇಡ.

ಕುಂಭ: ಉದ್ಯೋಗ, ವ್ಯವಹಾರದಲ್ಲಿ ಅಡಚಣೆಗಳು ಕಂಡುಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?