Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 21 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಮನಸ್ಸಿನಲ್ಲಿ ಬೇರೆಯವರ ಬಗ್ಗೆ ಅಸಮಾಧಾನ ಆಕ್ರೋಶಕ್ಕೆ ಕಾರಣವಾಗಬಹುದು. ಸಂಗಾತಿಯೊಂದಿಗೆ ಸಮಾಧಾನ ಚಿತ್ತದಿಂದ ಇರುವುದು ಉತ್ತಮ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು.

ವೃಷಭ: ವಾಕ್ಚತುರತೆಯಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಮಿಥುನ: ಯೋಗ್ಯ  ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ಸಾಂಸಾರಿಕವಾಗಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ.

ಕರ್ಕಟಕ: ವೈಯಕ್ತಿಕ ಜೀವನದಲ್ಲಿ ಕೆಲವು ಬದಲಾವಣೆಗೆ ಸಿದ್ಧರಾಗಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕೃಷಿಕರಿಗೆ ಬೆಳೆ ನಷ್ಟದ ಚಿಂತೆ ಕಾಡೀತು. ತಾಳ್ಮೆಯಿರಲಿ.

ಸಿಂಹ: ಎಷ್ಟೇ ಪ್ರಯತ್ನಪಟ್ಟರೂ ಕೆಲವೊಂದು ಅನಾಹುತಗಳನ್ನು ತಡೆಯಲಾಗದು. ಕೌಟುಂಬಿಕವಾಗಿ ಪರಸ್ಪರ ಸಹಕಾರವಿರಲಿದೆ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ.

ಕನ್ಯಾ: ಯಾವುದೇ ವಿಚಾರವನ್ನು ಮಕ್ತವಾಗಿ ಹಂಚಿಕೊಳ್ಳುವ  ಪ್ರವೃತ್ತಿ ತೋರುವಿರಿ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವಾಲಯ ಸಂದರ್ಶನ ಮಾಡುವಿರಿ.

ತುಲಾ: ಅಧಿಕ ಧನ ಸಂಪಾದನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅನಿರೀಕ್ಷಿತವಾಗಿ ನೆಂಟರಿಷ್ಟರ ಭೇಟಿ ಸಾಧ‍್ಯತೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನಪಲ್ಲಟವಾಗುವ ಸಾಧ‍್ಯತೆ.

ವೃಶ್ಚಿಕ: ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗಬಹುದು. ಮಾತಿನ ಮೇಲೆ ನಿಗಾ ಇರಲಿ. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ನಿಮ್ಮ ಅಭ್ಯಾಸಗಳಲ್ಲಿ ಕೆಲವು ಬದಲಾವಣೆ ತರಬೇಕಾಗಬಹುದು.

ಧನು: ಸರಕಾರೀ ನೌಕರರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಇನ್ನೊಬ್ಬರ ಸಮಸ್ಯೆಗೆ ಹೆಗಲು ಕೊಡಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಣೆಯಾಗಲಿದೆ. ತಾಳ್ಮೆಯಿರಲಿ.

ಮಕರ: ದೇವತಾ ಕಾರ್ಯಗಳಿಗೆ ಹೊರಟಿದ್ದರೆ ಕೆಲವು ವಿಘ್ನಗಳು ಬಂದು ಅರ್ಧಕ್ಕೇ ನಿಲ್ಲುವ ಸಂಭವ. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವ ಸಾಧ‍್ಯತೆ.

ಕುಂಭ: ಅಧಿಕ ಕೆಲಸದೊತ್ತಡದಿಂದ ಕೌಟುಂಬಿಕ ವಿಚಾರಕ್ಕೆಗಮನ ಹರಿಸಲಾಗದೇ ಅಸಹಾಯಕರಾಗಲಿದ್ದೀರಿ. ಸಂಗಾತಿಯ ಸಹಕಾರ ಪಡೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಮೀನ: ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಸಾಧ‍್ಯತೆ. ವಾಹನ, ಭೂಮಿ ಖರೀದಿ ಯೋಜನೆಗಳನ್ನು ಮುಂದೂಡಬೇಕಾದೀತು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಚಂದ್ರಘಂಟಾ ಮಂತ್ರ ಓದುವುದರಿಂದ ನಿಮಗೆ ಈ ಫಲಗಳು ಸಿಗುತ್ತವೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿ ದೇವನ ಈ ಮಂತ್ರಗಳನ್ನು ಪಠಿಸಿದರೆ ಶನಿ ದೋಷ ನಿವಾರಣೆಯಾಗುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರದಂದು ಪಠಿಸಬೇಕಾದ ಲಕ್ಷ್ಮೀ ದೇವಿಯ ಮಂತ್ರ

ಮುಂದಿನ ಸುದ್ದಿ
Show comments