Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 22 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಂಸಾರಿಕವಾಗಿ ಕೆಲವೊಂದು ಸಂದಿಗ್ಧತೆಗಳು ಕಾಡಲಿವೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ.

ಮಿಥುನ: ಜವಾಬ್ಧಾರಿಯುತ ಕೆಲಸಗಳಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಹುಡುಕಿಕೊಂಡು ಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ನಿಮ್ಮ ದೌರ್ಬಲ್ಯವನ್ನು ದುರುಪಯೋಗಪಡಿಸಿಕೊಳ್ಳುವ ಜನರಿರುತ್ತಾರೆ. ಎಚ್ಚರಿಕೆಯಿರಲಿ. ಹೊಸದಾಗಿ ಮದುವೆಯಾಗಿದ್ದವರಿಗೆ ಮಧು ಚಂದ್ರ ಭಾಗ್ಯ. ವ್ಯಾಪಾರಸ್ಥರಿಗೆ ವ್ಯವಹಾರ ಸುಗಮವಾಗಲಿದೆ.

ಸಿಂಹ: ಕಷ್ಟದ ಸಮಯದಲ್ಲಿ ಸಹಾಯ ಮಾಡಿದವರಿಗೆ ಮರಳಿ ಸಹಾಯ ಮಾಡುವ ಯೋಗ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿದೆ. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ನೀರು, ಬೆಂಕಿಯಿಂದ ಅಪಾಯವಾಗುವ ಸಾಧ‍್ಯತೆ. ಎಚ್ಚರಿಕೆಯಿರಲಿ.

ತುಲಾ: ಕಷ್ಟಕಾಲದಲ್ಲಿ ಆಪತ್ ಬಾಂಧವರಾದವರನ್ನು ಮರೆಯದೇ ಪ್ರತಿಫಲ ನೀಡಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಿಗೆ ತೊಡಕು ಕಂಡುಬಂದೀತು. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ನಡೆಸಬೇಕಾಗುತ್ತದೆ.

ಧನು: ಅನ್ಯರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಿ ಅಪವಾದಕ್ಕೆ ಗುರಿಯಾಗುವ ಸಾಧ‍್ಯತೆ. ನಿರುದ್ಯೋಗಿಗಳಿಗೆ ಸರಕಾರೀ ಉದ್ಯೋಗದ ಯೋಗವಿದೆ. ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ.

ಮಕರ: ಕಾರ್ಯರಂಗದಲ್ಲಿ ಕೊಂಚ ಮೈಮರೆತರೂ ತಕ್ಕ ಬೆಲೆ ತೆರಬೇಕಾದೀತು. ಉದ್ಯೋಗಿಗಳು ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡಲಿದ್ದಾರೆ. ಇಷ್ಟ ಭೋಜನ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನಿಮ್ಮಲ್ಲಿರುವ ಕುಂದು ಕೊರತೆಗಳು ಇನ್ನೊಬ್ಬರಿಗೆ ಕಾಣದಂತೆ ಎಚ್ಚರಿಕೆ ವಹಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಬೇಡ. ಹಳೆಯ ಬಾಕಿಗಳು ಪಾವತಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಎಷ್ಟೇ ಪ್ರಯತ್ನಪಟ್ಟರೂ ಸಮಸ್ಯೆ ಬಗೆಹರಿಯುತ್ತಿಲ್ಲ ಎಂಬ ಚಿಂತೆ ಕಾಡೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಮಕ್ಕಳಿಂದ ಸಂತೋಷ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವರ ಪ್ರಸಾದವನ್ನು ಯಾವ ದಿಕ್ಕಿಗೆ ಕೂತು ಸೇವಿಸಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ದೇವರ ಮನೆಯಲ್ಲಿ ಈ ವಸ್ತುಗಳನ್ನಿಡುವುದರಿಂದ ಮಹಾವಿಷ್ಣುವಿನ ಅನುಗ್ರಹ ದೊರೆಯುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ ಈ ಒಂದು ಕೆಲಸ ಮಾಡುವುದರಿಂದ ಆರೋಗ್ಯ ಸಮಸ್ಯೆ ನಿವಾರಣೆಯಾಗುತ್ತದೆ

ಮುಂದಿನ ಸುದ್ದಿ
Show comments