Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 23 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅಧ್ಯಯನ ನಿರತರಿಗೆ ಅನುಕೂಲಕರ ವಾತಾವರಣವಿರಲಿದೆ. ಉದ್ಯೋಗ, ವ್ಯವಹಾರದಲ್ಲಿ ಅಪರಿಚಿತರೂ ಸಹಾಯ ಮಾಡಲಿದ್ದಾರೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ತೃಪ್ತಿ ನಿಮ್ಮದಾಗುವುದು.

ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಬೇಕಾಗುತ್ತದೆ. ಸಾಂಸಾರಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ ಮಾಡಲಿದ್ದೀರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟ ಭೋಜನ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಅಡಚಣೆಗಳು ಬಂದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಹಿರಿಯರಿಗೆ ಆರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದೀತು. ಕಿರು ಸಂಚಾರ ನಡೆಸಲಿದ್ದೀರಿ.

ಕನ್ಯಾ: ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಬೇಕಾಗುತ್ತದೆ. ಪಾಲುದಾರಿಕಾ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಹಿಂಜರಿಕೆ ಕಂಡುಬಂದೀತು. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿದೆ.

ತುಲಾ: ಅತಿಯಾದ ಕೆಲಸದಿಂದ ದೇಹಾಯಾಸವಾದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಬೇರೆಯವರ ಸಲಹೆ ಪಡೆಯಲಿದ್ದೀರಿ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿಬರಲಿದೆ. ತಾಳ್ಮೆಯಿರಲಿ.

ಧನು: ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಲ್ಲಿ ಸಮಯ ಕಳೆದು ಹೋದೀತು. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಕೆಳ ಹಂತದ ನೌಕರರಿಗೆ ಹೊಸ ಅವಕಾಶಗಳು ಕಂಡುಬರಲಿದೆ.

ಮಕರ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಇಷ್ಟ ವ್ಯಕ್ತಿಗಳ ಜೊತೆ ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗಲಿದೆ.

ಕುಂಭ: ಇಂದು ದೈವಾನುಕೂಲದಿಂದ ನೀವು ಕೈ ಹಿಡಿಯುವ ಕೆಲಸಗಳು ಯಶಸ್ವಿಯಾಗಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಅನಿರೀಕ್ಷಿತವಾಗಿ ಸಿಗುವ ವ್ಯಕ್ತಿಗಳಿಂದ ನಿಮಗೆ ಉಪಕಾರವಾದೀತು.

ಮೀನ: ಹಣಕಾಸಿನ ವಿಚಾರದಲ್ಲಿ ಅನಿವಾರ್ಯವಾಗಿ ಬೇರೆಯವರನ್ನು ಅವಲಂಬಿಸುವ ಪರಿಸ್ಥಿತಿ ಬಂದೀತು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಪ್ರಗತಿ. ಕ್ಷುಲ್ಲುಕ ಕಾರಣಕ್ಕೆ ಆಪ್ತರೊಂದಿಗೆ ಭಿನ್ನಾಭಿಪ್ರಾಯ ತಂದುಕೊಳ್ಳಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶನ ದೇಹದ ಪ್ರತಿಯೊಂದು ಅವಯವಕ್ಕೂ ಅರ್ಥವಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗೌರಿ ಹಬ್ಬಕ್ಕೆ ಬಾಗಿನ ಕೊಡುವಾಗ ಈ ನಿಯಮ ಪಾಲಿಸಬೇಕು

ಲಕ್ಷ್ಮೀ ದೇವಿಯು ಸದಾ ಮಹಾವಿಷ್ಣುವಿನ ಪಾದದ ಬಳಿಯೇ ಇರುತ್ತಾಳೆ ಯಾಕೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments