ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 25 ಜೂನ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟ ಭೋಜನ ಮಾಡಲಿದ್ದೀರಿ. ಮಕ್ಕಳ ಮನಸ್ಸಂತೋಷಕ್ಕಾಗಿ ಕೆಲವು ಕೆಲಸ ಮಾಡಬೇಕಾಗುತ್ತದೆ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸ.

ವೃಷಭ: ಮನೆಗೆ ಅತಿಥಿಗಳನ್ನು ಸ್ವಾಗತಿಸಲು ಸಿದ್ಧತೆ ನಡೆಸಬೇಕಾಗುತ್ತದೆ. ಬಂಧು ಮಿತ್ರರ ಭೇಟಿ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಮೇಲಧಿಕಾರಿಗಳಿಂದ ಹೆಚ್ಚಿನ ಜವಾಬ್ಧಾರಿ ಸಿಗಲಿದೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿನ ಖುಷಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ.

ಕರ್ಕಟಕ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವ್ಯಾಪಾರಸ್ಥರು ವ್ಯವಹಾರಕ್ಕಾಗಿ ಅನ್ಯ ಊರಿಗೆ ಪ್ರಯಾಣ ಮಾಡಬೇಕಾಗಿಬರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

ಸಿಂಹ: ಕಾರ್ಯರಂಗದಲ್ಲಿ ನಿಮ್ಮ ಎದುರಾಳಿಗಳ ವಿರುದ್ಧ ಜಯ ಸಾಧಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಮನಸ್ಸಿನ ಮಾತುಗಳನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳಲಿದ್ದೀರಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ತಾಳ್ಮೆಯಿರಲಿ.

ತುಲಾ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಅಡೆತಡೆಗಳು ಬಂದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಸರಕಾರೀ ವೃತ್ತಿಯವರಿಗೆ ಉದ್ಯೋಗ ಸಂಬಂಧವಾದ ಚಿಂತೆ ಕಾಡೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಧನು: ಯಥೇಚ್ಛವಾಗಿ ನಿಮ್ಮ ಇಷ್ಟ ಭೋಜನ ಮಾಡುವ ಯೋಗ. ಕೌಟುಂಬಿಕವಾಗಿ ಸುಖ, ಸಮೃದ್ಧಿಯ ದಿನಗಳು. ಆದಾಯ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ನಯವಂಚಕರಿಂದ ದೂರವಿರುದೇ ಉತ್ತಮ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ.

ಕುಂಭ: ನೀವು ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಬಂದೀತು. ಹೊಸ ಕೆಲಸಗಳಿಗೆ ಹೊಂದಿಕೊಳ್ಳಲು ಕಷ್ಟಪಡಬೇಕಾದೀತು. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮೀನ: ಎಷ್ಟೇ ಕಾರ್ಯದೊತ್ತಡಗಳಿದ್ದರೂ ಮನೆಯವರೊಂದಿಗೆ ಸಮಯ ಕಳೆಯಲಿದ್ದೀರಿ. ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments