Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 29 ಜೂನ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಭವಿಷ್ಯದ ದೃಷ್ಟಿಯಿಂದ ಕೆಲವು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಯಶಸ್ಸು ಕಾಣಲಿದ್ದೀರಿ. ಮಹಿಳೆಯರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ.

ವೃಷಭ: ಅತಿಯಾಗಿ ಇನ್ನೊಬ್ಬರ ಬಗ್ಗೆ ಯೋಚನೆ, ನಕಾರಾತ್ಮಕ ಯೋಚನೆಗಳು ಮನಸ್ಸನ್ನು ಕಾಡಲಿದೆ. ಮನಸ್ಸಿನ ನೆಮ್ಮದಿಗಾಗಿ ಇಷ್ಟದೇವರ ಮೊರೆ ಹೋಗಲಿದ್ದೀರಿ. ಗುರುಹಿರಿಯರ ಸಲಹೆ ಪಡೆಯಲಿದ್ದೀರಿ.

ಮಿಥುನ: ದೈಹಿಕ ನೋವು, ಗಾಯ ಇತ್ಯಾದಿಗಳಾಗುವ ಸಾಧ‍್ಯತೆ. ಕುಟುಂಬ ಸದಸ್ಯರ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡಲಿದೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಗೆಲುವು. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಆಪ್ತರ ಮನೆಗೆ ಭೇಟಿ ನೀಡುವ ಸಾಧ‍್ಯತೆ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳಿಂದ ತೊಂದರೆ ಕಂಡುಬಂದೀತು. ತಾಳ್ಮೆಯಿರಲಿ.

ಸಿಂಹ: ನಿಮ್ಮ ಪ್ರೀತಿ ಪಾತ್ರರಿಂದ ಅನಿರೀಕ್ಷಿತ ಉಡುಗೊರೆಗಳನ್ನು ಪಡೆಯಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಕನ್ಯಾ: ನೆರೆಹೊರೆಯವರ ಕಷ್ಟಗಳಿಗೆ ಹೆಗಲು ಕೊಡಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಕ್ಕಳ ನಿಮಿತ್ತ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹೊಸದಾಗಿ ಆರಂಭಿಸಿದ್ದ ವ್ಯವಹಾರಗಳಿಂದ ಲಾಭ ಪಡೆಯಲಿದ್ದೀರಿ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ನಿಮಗೆ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಪಾಲುಬಂಡವಾಳ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಹಣಕಾಸಿನ ಪರಿಸ್ಥಿತಿಗಳು ಸುಧಾರಿಸಲಿವೆ. ಚಿಂತೆ ಬೇಡ.

ಧನು: ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಸ್ವಯಂ ವೃತ್ತಿಯವರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಮಕರ: ಸಭೆ, ಸಮಾರಂಭಗಳಲ್ಲಿ ಭಾಗಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕಲಾರಂಗದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಉದ್ಯೋಗ ಸಂಬಂಧವಾಗಿ ಪರವೂರಿಗೆ ಪ್ರಯಾಣಿಸುವ ಸಾಧ‍್ಯತೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ದಿನದಂತ್ಯಕ್ಕೆ ವಿಶೇಷ ಸುದ್ದಿ ಕೇಳಿಬರಲಿದೆ.

ಮೀನ: ಯಾವುದೇ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವದು ಉತ್ತಮ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?