Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 8 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕರ್ತವ್ಯ ನಿಷ್ಠೆಯಿಂದ ಮೇಲಧಿಕಾರಿಗಳ ಗಮನ ಸೆಳೆಯಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಗುರುಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಮಿಥುನ: ಧನಾದಾಯ ಹೆಚ್ಚಳಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಮೂರನೆಯವರ ಹಸ್ತಕ್ಷೇಪಕ್ಕೆ ಅವಕಾಶ ಕೊಡಬೇಡಿ. ಪಾಲುದಾರಿಕಾ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಆರ್ಥಿಕವಾಗಿ ಪರಿಸ್ಥಿತಿ ಸುಧಾರಿಸಲಿದೆ. ಮೆಚ್ಚಿನ ವ್ಯಕ್ತಿಗಳ ಭೇಟಿ ಮನಸ್ಸಿಗೆ ಸಂತೋಷ ನೀಡಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಕಾರ್ಯದೊತ್ತಡ ಕಂಡುಬಂದೀತು.

ಕನ್ಯಾ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟಭೋಜನ ಮಾಡುವ ಯೋಗ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ತುಲಾ: ನಿಮಗೆ ಎದುರಾಗಿರುವ ಸವಾಲುಗಳಿಗೆ ಕ್ರಿಯಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ವೃಶ್ಚಿಕ: ಧನಾತ್ಮಕ ವಿಚಾರಗಳು ನಿಮ್ಮ ಮನಸ್ಸಿಗೆ ನೆಮ್ಮದಿ ಕೊಡಲಿವೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ಕೆಲಸ ಕಾರ್ಯಗಳಲ್ಲಿ ಮುನ್ನಡೆ.

ಧನು: ಕೆಳ ಹಂತದ ನೌಕರರಿಗೆ ಉನ್ನತ ಅವಕಾಶಗಳು ಕಂಡುಬಂದೀತು. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಯಲ್ಲಿ ಇತರ ಸದಸ್ಯರ ಅಭಿಪ್ರಾಯಗಳನ್ನು ಪಡೆದು ಮುಂದುವರಿಯಬೇಕಾಗುತ್ತದೆ.

ಕುಂಭ: ಭೂಮ್ಯಾದಿ ವ್ಯವಹಾರಗಳಿಗೆ ತೊಡಕುಂಟಾದೀತು. ವೈದ್ಯಕೀಯ ವೃತ್ತಿಯವರಿಗೆ ಮುನ್ನಡೆಯ ಯೋಗ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಬಂದಾಗ ಬಳಸಿಕೊಳ್ಳಿ.

ಮೀನ: ನಿಮ್ಮ ಜೀವನದಲ್ಲಿ ಏನನ್ನೋ ಕಳೆದುಕೊಂಡ ಭಾವ ಕಾಡೀತು. ಮನಸ್ಸಿನ ನೆಮ್ಮದಿಗೆ ಕುಲದೇವರ ಪ್ರಾರ್ಥನೆ ಮಾಡಿ. ಉದ್ಯೋಗ ಕ್ಷೇತ್ರದಲ್ಲಿ ಸ‍್ಥಾನ ಪಲ್ಲಟ ಭೀತಿ. ಕೌಟುಂಬಿಕವಾಗಿ ಸಹಕಾರವಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?