Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 10 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾದೀತು. ವಿದ್ಯಾರ್ಥಿಗಳಿಗೆ ಹೊಸ ಸವಾಲುಗಳು ಎದುರಾಗಲಿವೆ. ತಾಳ್ಮೆಯಿರಲಿ.

ವೃಷಭ: ಭೂಮ್ಯಾದಿ ವ್ಯವಹಾರಗಳಲ್ಲಿ ಅಪರಿಚಿತರನ್ನು ನಂಬಿ ವಂಚನೆಗೊಳಗಾಗಬೇಡಿ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಮಿಥುನ: ವ್ಯಾವಹಾರಿಕವಾಗಿ ನಿಮಗೆ ಎದುರಾಳಿಯಾಗಿದ್ದವರಿಂದ ತೊಂದರೆಗಳು ಎದುರಾದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ.

ಕರ್ಕಟಕ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ಕೊಡದಿರಿ. ಅತಿಯಾದ ಆಸೆ ಸಲ್ಲದು. ಉದ್ಯೋಗ, ವ್ಯವಹಾರಗಳಲ್ಲಿ ಉತ್ತಮ ಲಾಭ ಕಂಡುಬರಲಿದೆ. ಹೆಚ್ಚಿನ ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಸಿಂಹ: ನಿಮ್ಮಲ್ಲಿರುವ ಬಹುದಿನಗಳ ಚಿಂತೆಗೆ ವಿರಾಮ ನೀಡಲಿದ್ದೀರಿ. ನೆರೆಹೊರೆಯವರ ಸಹಾಯಕ್ಕೆ ಧಾವಿಸುವಿರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬಂದೀತು. ತಾಳ್ಮೆಯಿರಲಿ.

ಕನ್ಯಾ: ಎಷ್ಟೇ ಕಷ್ಟವಿದ್ದರೂ ಇತರರಿಗೆ ಸಹಾಯ ಮಾಡುವ ಮನೋಭಾವ ನಿಮ್ಮದು. ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ತೊಂದರೆಗಳು ಎದುರಾದೀತು. ಕಾರ್ಯ ರಂಗದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ತುಲಾ: ವಸ್ತು ಸ್ಥಿತಿ ಅರಿತು ನಿರ್ಣಯಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಪರರನ್ನು ಅವಲಂಬಿಸದೇ ನಿಮ್ಮ ಸ್ವಯಂ ಸಾಮರ್ಥ್ಯದಿಂದ ಕೆಲಸ ಪೂರ್ತಿ ಮಾಡಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ ಪಡಬೇಕಾದೀತು. ದೇವತಾ ದರ್ಶನದಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ.

ಧನು: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಉತ್ತಮ ಧನಾರ್ಜನೆಗೆ ಅವಕಾಶ ಸಿಗಲಿದೆ.

ಮಕರ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಅಗತ್ಯಕ್ಕೂ ಮೀರಿದ ವಸ್ತುಗಳನ್ನು ಇತರರಿಗೆ ದಾನ ಮಾಡುವ ಪ್ರವೃತ್ತಿ ಕಂಡುಬರಲಿದೆ. ನೀರು, ಬೆಂಕಿಯೊಂದಿಗೆ ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಕೆಲಸದ ಒತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ.

ಮೀನ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗಲಿದೆ. ಮನರಂಜನಾ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗ. ನೂತನವಾಗಿ ಮದುವೆಯಾದವರಿಗೆ ಮಧು ಚಂದ್ರ ಭಾಗ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments