Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 12 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಬದಲಾವಣೆಗಾಗಿ ನೀವು ಮಾಡುತ್ತಿರುವ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಸಹೋದರಾದಿ ಸಂಬಂಧಿಗಳಿಂದ ನೆರವು ಸಿಗಲಿದೆ. ಕೌಟುಂಬಿಕವಾಗಿ ಸಾಮರಸ್ಯ ಕಾಪಾಡಿಕೊಳ್ಳಿ.

ವೃಷಭ: ಉದ್ಯೋಗ ಕ್ಷೇತ್ರಗಳಲ್ಲಿ ನೀವು ಮಾಡುವ ಹೊಸ ಪ್ರಯತ್ನಗಳಿಗೆ ತಕ್ಕ ಮನ್ನಣೆ ಸಿಗದೇ ನಿರಾಸೆಯಾದೀತು. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕರ್ಕಟಕ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗುವ ಸಾಧ‍್ಯತೆ. ಹಿರಿಯಿರಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಉತ್ತಮ. ಸನ್ಮಿತ್ರರ ಸಹಕಾರದಿಂದ ಕಾರ್ಯರಂಗದಲ್ಲಿ ಮುನ್ನಡೆ ಸಿಗುವುದು. ನೆರೆಹೊರೆಯವರ ಸಹಾಯಕ್ಕೆ ಧಾವಿಸಲಿದ್ದೀರಿ.

ಕನ್ಯಾ: ಉನ್ನತ ವ್ಯಾಸಂಗ ಮಾಡುವವರಿಗೆ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಉನ್ನತ ಸ್ಥಾನಕ್ಕೇರುವ ನಿಮ್ಮ ಬಯಕೆ ಸದ್ಯದಲ್ಲೇ ನನಸಾಗುವುದು. ಅಪರಿಚಿತರಿಂದಲೂ ಸಹಾಯ ಪಡೆಯಲಿದ್ದೀರಿ.

ತುಲಾ: ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಸಾಧ‍್ಯತೆ.ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಉನ್ನತ ಅಧಿಕಾರಿಗಳಿಂದ ನಿಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸಿಗುವುದು. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಧನು: ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ನಿರೀಕ್ಷಿಸಬಹುದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಾಡಿದ ಕೆಲಸವನ್ನೇ ಮತ್ತೆ ಮತ್ತೆ ಮಾಡಬೇಕಾದ ಅನಿವಾರ್ಯತೆ ಬಂದೀತು. ಭೂಮ್ಯಾದಿ ವ್ಯವಹಾರಗಳಿಗೆ ಅನುಕೂಲಕರ ಪರಿಸ್ಥಿತಿ ಇರಲಿದೆ.

ಕುಂಭ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಕೊಂಚ ಹಿನ್ನಡೆಯಿದ್ದರೂ ನಷ್ಟವಾಗದು. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ. ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳಾಗುವ ಸಾಧ‍್ಯತೆ.

ಮೀನ: ಬಹಳ ದಿನಗಳ ನಂತರ ಆತ್ಮೀಯರನ್ನು  ಭೇಟಿಯಾಗುವ ಸಂಭ್ರಮ. ಬಾಡಿಗೆದಾರರು ವಾಸಸ್ಥಳ ಬದಲಾವಣೆ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

ಮುಂದಿನ ಸುದ್ದಿ
Show comments