Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 24 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅಧಿಕ ಧನಸಂಚಯನ ಮಾಡುವ ದಿನವಿದು. ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ದೈಹಿಕವಾಗಿ ನೋವು, ಅನಾರೋಗ್ಯ ಕಾಡೀತು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಹಿಂದೆ ಮಾಡಿದ ಸಹಾಯಕ್ಕೆ ತಕ್ಕ ಪ್ರತಿಫಲ ಪಡೆಯಲಿದ್ದೀರಿ.

ಮಿಥುನ: ಸಾಂಸಾರಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ.

ಕರ್ಕಟಕ: ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿಮ್ಮ ಮಾತಿನಿಂದ ಇತರರಿಗೆ ನೋವಾದೀತು. ತಾಳ್ಮೆಯಿರಲಿ.

ಸಿಂಹ: ಕೌಟುಂಬಿಕ ಹಿತಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರುವುದು. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ.

ಕನ್ಯಾ: ನಿರೀಕ್ಷೆಗೂ ಮೀರಿದ ಧನಾಗಮನವಾಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ ಕಂಡುಬರಲಿದೆ.

ತುಲಾ: ಮನೆಯಲ್ಲಿ ಸದ್ಯದಲ್ಲೇ ಶುಭ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ನಿಮ್ಮ ಹಳೆಯ ಬಾಕಿಗಳು ಸಂದಾಯವಾಗಲಿದೆ. ಸನ್ಮಿತ್ರರಿಂದ ಕೆಲಸ ಕಾರ್ಯಗಳಲ್ಲಿ ಸಹಾಯ ಒದಗಿಬರಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಧನು: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ.

ಮಕರ: ದೇಹಾರೋಗ್ಯದ ನಿಮಿತ್ತ ವೈದ್ಯರ ಬಳಿ ಹೋಗುವ ಪ್ರಸಂಗ ಬಂದೀತು. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿವೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ತಾಳ್ಮೆಯಿರಲಿ.

ಕುಂಭ: ಕಾರ್ಯರಂಗದಲ್ಲಿ ನಿಮ್ಮ ಚುರುಕು ಕೆಲಸಗಳು ಮೇಲಧಿಕಾರಿಗಳ ಗಮನ ಸೆಳೆಯಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಮಕ್ಕಳಿಂದ ಸಂತೋಷ ಸಿಗುವುದು.

ಮೀನ: ನಿಮ್ಮ ಅಧಿಕಾರಯುತ ಧೋರಣೆ ಇತರರಿಗೆ ಕಿರಿ ಕಿರಿ ಉಂಟುಮಾಡೀತು. ವಾಹನಾದಿ ಸೌಕರ್ಯ ನಿಮ್ಮದಾಗಿಸಿಕೊಳ್ಳಲಿದ್ದೀರಿ. ಮಕ್ಕಳಿಗೋಸ್ಕರ ಶ್ರಮ ಪಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments