Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 29 ಜುಲೈ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಾನಸಿಕ ನೆಮ್ಮದಿಗಾಗಿ ದೇವಾಲಯ ಸಂದರ್ಶನ ಮಾಡಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಸಂಗಾತಿಯ ಧೋರಣೆ ಅಸಮಾಧಾನಕ್ಕೆ ಕಾರಣವಾದೀತು. ತಾಳ್ಮೆ ತಂದುಕೊಳ್ಳಿ.

ವೃಷಭ: ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆದಾಯದಲ್ಲಿ ಅತೃಪ್ತಿ ಭಾವ ಕಾಡಲಿದೆ. ಹಣ ಗಳಿಕೆಗೆ ಹೊಸ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಗುರುಹಿರಿಯರ ಆಶೀರ್ವಾದದೊಂದಿಗೆ ಹೊಸ ಕೆಲಸಕ್ಕೆ ಕೈ ಹಾಕುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಬೇರೆಯವರಿಂದ ಮುಚ್ಚಿಟ್ಟ ರಹಸ್ಯಗಳು ಬಯಲಾಗುವ ಸಮಯ. ಕೆಲಸದ ಮೇಲಿನ ನಿಮ್ಮ ಅಸಡ್ಡೆ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ಸಿಂಹ: ನಾಲ್ಕು ಜನರ ಮಧ್ಯೆ ನಿಮ್ಮ ನಾಯಕತ್ವದ ಗುಣ ಎದ್ದು ಕಾಣಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುದುವು. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆ ಸಿಗುವುದು.

ಕನ್ಯಾ: ಇಷ್ಟು ದಿನದ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಪಡೆಯುವ ಸಂದರ್ಭ. ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳಿಂದ ಸಂತೋಷ.

ತುಲಾ: ಕಾರ್ಯರಂಗದಲ್ಲಿ ನಿಮ್ಮ ಎದುರಾಳಿಗಳನ್ನು ಮೀರಿಸುವ ಹಠ ಕಂಡುಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗುವುದು. ಯಂತ್ರೋಪಕರಣಗಳಿಂದ ತೊಂದರೆ ಎದುರಾಗುವ ಸಾಧ‍್ಯತೆ.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲು ಖರ್ಚು ವೆಚ್ಚ ಮಾಡಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಮೇಲಧಿಕಾರಿಗಳಿಂದ ಕೆಲಸ ಪೂರ್ತಿ ಮಾಡುವ ವಿಚಾರದಲ್ಲಿ ಒತ್ತಡಗಳು ಎದುರಾದೀತು. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿ ಮಾಡುವ ಯೋಗ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ತಾಳ್ಮೆಯಿರಲಿ.

ಮಕರ: ಕ್ರಿಯಾತ್ಮಕ ಕೆಲಸಗಳಿಂದ ಬೇರೆಯವರ ಗಮನ ಸೆಳೆಯಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ.

ಕುಂಭ: ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮಹಿಳೆಯರು ವಾಕ್ಚತುರತೆಯಿಂದ ಮೇಲುಗೈ ಸಾಧಿಸಲಿದ್ದಾರೆ. ಸರಕಾರಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಬುದ್ಧಿವಂತಿಕೆಯಿಂದ ಕಾರ್ಯ ಸಾಧನೆ ಮಾಡಲಿದ್ದೀರಿ.

ಮೀನ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾಗುವ ಯೋಗ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದಾಂಪತ್ಯದಲ್ಲಿ ಮಧ‍್ಯಮ ಸುಖ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments