Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 19 ಆಗಸ್ಟ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೊಸ ಅವಕಾಶಗಳು ಲಭ್ಯವಾಗಲಿದೆ. ಗುರುಹಿರಿಯರ ಮಾರ್ಗದರ್ಶನದಿಂದ ಸರಿಯಾದ ದಾರಿಯಲ್ಲಿ ನಡೆಯಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ವೃಷಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿವೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸದಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯಲಿದ್ದೀರಿ.

ಮಿಥುನ: ವ್ಯಾಪಾರಿಗಳಿಗೆ ಹಣಕಾಸಿನ ವಿಚಾರವಾಗಿ ಅಡೆತಡೆಗಳು ನಿವಾರಣೆಯಾಗಲಿವೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ಪ್ರೀತಿ ಪಾತ್ರರ ಕಷ್ಟಗಳಿಗೆ ಜೊತೆಯಾಗಿ ನಿಲ್ಲಲಿದ್ದೀರಿ.

ಕರ್ಕಟಕ: ಉದ್ಯೋಗ, ವ್ಯವಹಾರ ನಿಮಿತ್ತ ದೂರ ಪ್ರಯಾಣ ಮಾಡಬೇಕಾದ ಅನಿವಾರ್ಯತೆ. ದೇವತಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ತಾಳ್ಮೆ ಅಗತ್ಯ.

ಸಿಂಹ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮನೆ, ವಾಹನ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚವಾಗಲಿದೆ. ದೂರ ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ನೆರೆಹೊರೆಯವರಿಂದ ಸಹಾಯ ಪಡೆಯಲಿದ್ದೀರಿ.

ಕನ್ಯಾ: ಮಾತಿಗೆ ವಿರುದ್ಧವಾಗಿ ನಡೆದುಕೊಂಡ ಪಶ್ಚಾತ್ತಾಪ ಕಾಡಲಿದೆ. ಸಂಗಾತಿಯ ಕಷ್ಟಗಳಿಗೆ ಜೊತೆಯಾಗಿ ನಿಲ್ಲಬೇಕಾಗುತ್ತದೆ. ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ಯೋಗ.

ತುಲಾ: ನೀವು ಮಾಡುತ್ತಿರುವ ಕೆಲಸ ಬಿಟ್ಟು ಹೊಸ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವುದರ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತೀರ್ಥ ಯಾತ್ರಿಗಳಿಗೆ ಅಡೆತಡೆಗಳು ಬಂದೀತು. ಕೊಡು-ಕೊಳ್ಳುವ ವ್ಯವಹಾರದಲ್ಲಿ ಮುನ್ನಡೆ.

ವೃಶ್ಚಿಕ: ಮನೆಯವರ ಪ್ರೋತ್ಸಾಹದಿಂದ ನಿಮ್ಮದೇ ಸ್ವಯಂ ಉದ್ದಿಮೆ ಪ್ರಾರಂಭಿಸುವ ಕನಸು ನನಸು ಮಾಡಿಕೊಳ್ಳಲಿದ್ದೀರಿ. ನೆಂಟರಿಷ್ಟರ ಭೇಟಿ ಯೋಗ.  ದೇವಾಲಯ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ.

ಧನು: ಬಂಧು ಮಿತ್ರರ ಭೇಟಿ ಯೋಗ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾರಾಧನೆಯಿಂದ ಮನಸ್ಸಿಗೆ ನೆಮ್ಮದಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗಲಿದೆ.

ಮಕರ: ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆ ಕೊರತೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ.  ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಚಿಂತೆ ಬೇಡ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.  ದಂಪತಿಗಳಲ್ಲಿ ಅನುರಾಗ ವೃದ‍್ಧಿಯಾಗಲಿದೆ. ಹೊಸ ಉದ್ಯಮ ಆರಂಭಕ್ಕೆ ಅವಸರ ಬೇಡ. ತಾಳ್ಮೆಯಿರಲಿ.

ಮೀನ: ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಅನಿವಾರ್ಯ ಕಾರಣಗಳಿಗೆ ಪರವೂರಿಗೆ ಸಂಚರಿಸಬೇಕಾದೀತು. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments