Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 26 ಆಗಸ್ಟ್ 2023 (07:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮನಸ್ಸಿನಲ್ಲಿರುವ ಕಾಡುತ್ತಿರುವ ಚಿಂತೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸಲಿದ್ದೀರಿ. ಸಂಗಾತಿಯಿಂದ ಕಿರಿ ಕಿರಿ ಕಂಡುಬಂದೀತು. ಸ್ನೇಹಿತರನ್ನು ಭೇಟಿ ಮಾಡಲಿದ್ದೀರಿ. ದೇವಾಲಯ ಸಂದರ್ಶನ ಯೋಗ.

ವೃಷಭ: ಇಷ್ಟಮಿತ್ರರೊಂದಿಗೆ ಕಾಲ ಕಳೆಯಲು ಅವಕಾಶ ಸಿಗಲಿದೆ. ಹೆಚ್ಚು ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತೋಷವಿರಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಎಲ್ಲವೂ ನೀವಂದುಕೊಂಡಂತೆಯೇ ನಡೆಯಲಿದೆ. ಅವಶ್ಯತೆಯಿದ್ದಾಗ ಮಾತ್ರ ನಿಮ್ಮ ಬಳಿ ಬರುವವರ ಬಗ್ಗೆ ಎಚ್ಚರಿಕೆಯಿಂದಿರಿ. ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ.

ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ನಿಮ್ಮ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಳ್ಳುವವರಿರುತ್ತಾರೆ ಎಚ್ಚರಿಕೆಯಿರಲಿ. ಹೊಸ ಕೆಲಸಕ್ಕೆ ಕೈ ಹಾಕಲು ಶುಭ ದಿನ.

ಕನ್ಯಾ: ಯಾವುದೇ ವಿಚಾರವಾದರೂ ಇನ್ನೊಬ್ಬರೊಂದಿಗೆ ಮುಕ್ತವಾಗಿ ಮಾತನಾಡಲು ಹಿಂಜರಿಕೆ ಕಂಡುಬರಲಿದೆ. ಸಂಗಾತಿಯಿಂದ ಸಿಗುವ ಸಲಹೆಗಳು ಉಪಯೋಗಕ್ಕೆ ಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಅನುಕೂಲಕರ ವಾತಾವರಣವಿರಲಿದೆ. ಸ್ವಯಂ ವೃತ್ತಿಯವರಿಗೆ ಲಾಭದಾಯಕ ದಿನ. ಸಾಂಸಾರಿಕವಾಗಿ ಪರಸ್ಪರ ಹೊಂದಾಣಿಕೆ ಅಗತ್ಯ. ಮಕ್ಕಳಿಂದ ಶುಭ ವಾರ್ತೆ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಧನು: ಮಕ್ಕಳ ಭವಿಷ್ಯಕ್ಕಾಗಿ ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ನಿರೀಕ್ಷಿಸಬಹುದು.

ಮಕರ: ಬಹಳ ದಿನಗಳ ನಂತರ ಬಂಧು ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಆಪ್ತರ ಕೆಲವೊಂದು ಮಾತುಗಳು ನೋವಾದರೂ ಸತ್ಯವೆನಿಸಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಹಿರಿಯರಿಗೆ ದಾನ ಧರ್ಮದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಯಾರಿಗೂ ಇಂದು ಸಾಲ ಕೊಡಬೇಡಿ.

ಮೀನ: ಸವಾಲುಗಳನ್ನು ಎದುರಿಸಿ ನಿಲ್ಲುವ ನಿಮ್ಮ ಗುಣ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಮಕ್ಕಳ ವಿದ್ಯಾಬ್ಯಾಸದಲ್ಲಿ ಪ್ರಗತಿ ಕಂಡುಬರುವುದು.  ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?