ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 31 ಆಗಸ್ಟ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಬೇರೆಯವರ ಬಗ್ಗೆ ಅತಿಯಾಗಿ ಚಿಂತಿಸುವುದನ್ನು ಬಿಟ್ಟು ನಿಮ್ಮ ಭವಿಷ್ಯದ ದಾರಿ ನೋಡಿಕೊಳ್ಳಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಅಪರಿಚಿತರಿಂದಲೂ ಸಹಾಯ ಒದಗಿಬರಲಿದೆ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಚಿನ್ನಾಭರಣ ವ್ಯಾಪಾರಿಗಳಿಗೆ ಮುನ್ನಡೆಯ ಯೋಗ. ಮಹಿಳೆಯರಿಗೆ ಮಂಗಲ ವಸ್ತ್ರಾಭರಣ ಖರೀದಿ ಯೋಗ. ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲ ಸಿಗುವುದು.  ಮಕ್ಕಳಿಂದ ಸಂತೋಷ ಸಿಗುವುದು.

ಕನ್ಯಾ: ನಿಮ್ಮಲ್ಲಿರುವ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕಾದೀತು. ನಿರುದ್ಯೋಗಿಗಳಿಗೆ ಯೋಗ್ಯತೆಗೆ ಅನುಗುಣವಾಗಿ ಉದ್ಯೋಗ ಸಿಗುವುದು. ಭೂಮ್ಯಾದಿ ವ್ಯವಹಾರಗಳಿಂದ ಲಾಭವಾಗುವುದು.

ತುಲಾ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಇನ್ನೊಬ್ಬರ ಹಸ್ತಕ್ಷೇಪ ಅಸಮಾಧಾನಕ್ಕೆ ಕಾರಣವಾದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಲಿದ್ದೀರಿ.

ವೃಶ್ಚಿಕ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಪೈಪೋಟಿ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಆಪ್ತರಿಂದ ನಿರೀಕ್ಷಿತ ಸಹಾಯ ಲಬ್ಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಯಾವುದೇ ವಿಚಾರವಾದರೂ ಯೋಚಿಸಿ ಮುಂದಡಿಯಿಡುವುದು ಸೂಕ್ತ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಅನುಕೂಲ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಬರಲಿದೆ. ಯೋಗ, ಧ್ಯಾನದಲ್ಲಿ ಒಲವು ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು.

ಮೀನ: ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಅವಿವಾಹಿತರಿಗೆ ಸೂಕ್ತ ವೈವಾಹಿಕ ನೆಂಟಸ್ತಿಕೆ ಕೂಡಿಬರಲಿದೆ. ದಾಂಪತ್ಯ ಜೀವನದಲ್ಲಿ ತೃಪ್ತಿ ಕಂಡುಬರಲಿದೆ. ಅಲ್ಪಕಾಲದ ಹೂಡಿಕೆಯಿಂದ ಲಾಭ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments