Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 1 ಸೆಪ್ಟಂಬರ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಅಗತ್ಯತೆ ಮೇಲಧಿಕಾರಿಗಳಿಗೆ ಮನವರಿಕೆಯಾಗಲಿದೆ. ಪರಿಚಿತರ ಕಷ್ಟದಲ್ಲಿ ನೆರವಾದ ನೆಮ್ಮದಿ ನಿಮ್ಮದಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ.

ವೃಷಭ: ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವಿವಾಹ ಸಂಬಂಧ ಮಾತುಕತೆಯಲ್ಲಿ ಪ್ರಗತಿ ಕಂಡುಬರುವುದು. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು.

ಮಿಥುನ: ಗೃಹಿಣಿಯರಿಗೆ ಸಾಂಸಾರಿಕವಾಗಿ ಹೆಚ್ಚಿನ ಜವಾಬ್ಧಾರಿ  ಹೆಗಲಿಗೇರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರುವುದು.

ಕರ್ಕಟಕ: ನಿಮ್ಮ ಮನೋಬಲ ಹೆಚ್ಚಿಸಿಕೊಳ್ಳುವುದರಿಂದ ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಯಶಸ್ಸು ಪಡೆದುಕೊಳ್ಳಲಿದ್ದೀರಿ. ಸಹೋದರ ಸಂಬಂಧಿಗಳೊಂದಿಗಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲಿದ್ದೀರಿ. ಚಿಂತೆ ಬೇಡ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ಆರ್ಥಿಕವಾಗಿ ನಾನಾ ಮೂಲಗಳಿಂದ ಹಣಕಾಸಿನ ಹರಿವು ಇರಲಿದೆ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಬಾಕಿ ಹಣ ಸಂದಾಯವಾಗಲಿದೆ.

ಕನ್ಯಾ: ಉದ್ಯೋಗ ರಂಗದಲ್ಲಿ ಹೆಚ್ಚಿನ ಅವಕಾಶಗಳು ನಿಮ್ಮದಾಗಲಿದೆ. ದೇವತಾರಾಧನೆಯಿಂದ ಶುಭ ಫಲ ನಿರೀಕ್ಷಿಸಬಹುದು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ತುಲಾ: ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಶ್ರಮವಹಿಸಬೇಕಾದೀತು. ತಾಳ್ಮೆಯಿರಲಿ.

ವೃಶ್ಚಿಕ: ಅನ್ಯರ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವ ಪರಿಸ್ಥಿತಿ ಎದುರಾದೀತು. ಪಾಲು ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಲಾಭ ಕಂಡುಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಇತರರ ಅನುಕೂಲಕ್ಕಾಗಿ ನಿಮ್ಮ ದೈನಂದಿನ ಕೆಲಸಗಳಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ದೈಹಿಕವಾಗಿ ಹೆಚ್ಚಿನ ಶ್ರಮವಹಿಸಬೇಕಾದೀತು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಲಿದೆ.

ಮಕರ: ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯಕ್ಕೊಳಗಾಗಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಒಳಿತಾಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.

ಮೀನ: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಅರಸಿಕೊಂಡು ಬರಲಿವೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾದ ನೆಮ್ಮದಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಮುಂದಿನ ಸುದ್ದಿ
Show comments