ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 2 ಸೆಪ್ಟಂಬರ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿಂದೆ ಮಾಡಿದ ತಪ್ಪುಗಳಿಗೆ ಪ್ರಾಯಶ್ಚಿತ ಮಾಡಿಕೊಳ್ಳಲಿದ್ದೀರಿ. ಗೃಹಿಣಿಯರಿಗೆ ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಬೇಕಾದೀತು. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಪ್ರಗತಿ ಕಂಡು ನೆಮ್ಮದಿಯಾಗಲಿದೆ.

ವೃಷಭ: ಮನಸ್ಸಿಗೆ ಇಷ್ಟವಾಗುವ ವ್ಯಕ್ತಿಗಾಗಿ ನೀವು ಹುಡುಕಾಡುತ್ತಿದ್ದರೆ ಇಂದು ಫಲ ಸಿಗಲಿದೆ. ಯಂತ್ರೋಪಕರಣಗಳೊಂದಿಗೆ ಕೆಲಸ ಮಾಡುವಾಗ ಎಚ್ಚರಿಕೆ ವಹಿಸಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ.

ಮಿಥುನ: ಭವಿಷ್ಯದ ಯೋಜನೆ ಬಗ್ಗೆ ಮೀನ ಮೇಷ ಎಣಿಸುತ್ತಾ ಕೂರುವುದು ಬೇಕಾಗಿಲ್ಲ. ನಿಮಗೆ ಅನುಕೂಲಕರವಾದ ಉದ್ಯೋಗಾವಕಾಶಗಳು ಬರಲಿವೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಕರ್ಕಟಕ: ನಿಮ್ಮ ಹಿಂದಿನ ಬಾಕಿ ಪಾವತಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪರಿಸ್ಥಿತಿ ಸುಧಾರಿಸಲಿದೆ. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಗುರುಹಿರಿಯರ ಸಲಹೆ ಪಡೆಯಿರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಉದ್ಯೋಗ, ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ ಕಂಡುಬರುವುದು. ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಸುಧಾರಣೆ ಕಂಡುಬರಲಿದೆ.

ಕನ್ಯಾ: ವಿದೇಶದಲ್ಲಿ ಉದ್ಯೋಗದಲ್ಲಿರುವವರಿಗೆ ತವರಿಗೆ ಭೇಟಿ ನೀಡುವ  ಯೋಗ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ನಡೆಸಿ. ಮೇಲಧಿಕಾರಿಗಳಿಂದ ಕಾರ್ಯದೊತ್ತಡ ಕಂಡುಬರಲಿದೆ. ತಾಳ್ಮೆಯಿರಲಿ.

ತುಲಾ: ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗಾವಕಾಶಗಳು ಬರಲಿವೆ. ವಿದ್ಯಾರ್ಥಿಗಳು ಆಯ್ಕೆ ವಿಚಾರದಲ್ಲಿ ಗೊಂದಲಕ್ಕೀಡಾಗಲಿದ್ದಾರೆ.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಬಹುದಿನಗಳ ನಿಮ್ಮ ಕನಸು ಈಡೇರಿಸಿಕೊಳ್ಳಲಿದ್ದೀರಿ. ಉದ್ಯೋಗಾರ್ಥ ಸಂದರ್ಶನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ವಿದ್ಯಾರ್ಥಿಗಳಿಗೆ ದೈಹಿಕವಾಗಿ ಚಟುವಟಿಕೆಯಿಂದ ಕೂಡಿದ ದಿನ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ನೆರೆಹೊರೆಯವರಿಂದ ಸಹಾಯ ಸಿಗುವುದು.

ಮಕರ: ಅನವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಬೇರೆಯವರು ಮೂಗು ತೂರಿಸುವುದರಿಂದ ಕಿರಿ ಕಿರಿ ಅನುಭವಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಕುಟುಂಬ ಸೌಖ್ಯಕ್ಕಾಗಿ ದೇವತಾ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಮೂರನೆಯವರು ಹಸ್ತಕ್ಷೇಪ ಮಾಡಲು ಅವಕಾಶ ಕೊಡಬೇಡಿ. ತಾಂತ್ರಿಕ ವೃತ್ತಿಯವರಿಗೆ ಬಿಡುವಿನ ಸಂತೋಷ ಸಿಗುವುದು.

ಮೀನ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಭೂಮ್ಯಾದಿ ವ್ಯವಹಾರಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಉತ್ತಮ. ಹಳೆಯ ಬಾಕಿ ಸಂದಾಯವಾಗಲಿದೆ. ಆರೋಗ್ಯದಲ್ಲಿ ಚೇತರಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments