ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Krishnaveni K
ಮಂಗಳವಾರ, 9 ಜನವರಿ 2024 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳು ಎದುರಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ನೆರೆಹೊರೆಯವರ ಕಷ್ಟಕ್ಕೆ ನೆರವಾಗಲಿದ್ದೀರಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆಯ ಯೋಗ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಸ್ಥಿತಿ ಗತಿ ಸುಧಾರಿಸಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಿಥುನ: ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಕಾರ್ಯರಂಗದಲ್ಲಿ ಹಲವು ಆಯ್ಕೆಗಳು ಬರಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಅನುಭವವೇ ನಿಮಗೆ ಪಾಠ ಕಲಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಕೈಗಾರಿಕೋದ್ಯಮಿಗಳಿಗೆ ಲಾಭವಾದೀತು. ಅನಗತ್ಯ ಚಿಂತೆ ಬೇಡ.

ಸಿಂಹ: ವಿರೋಧಿಗಳಿಂದ ನಿಮ್ಮ ಶಾಂತಿ, ಸಮಾಧಾನಕ್ಕೆ ಧಕ್ಕೆಯಾಗಲಿದೆ. ವಿರೋಧಿಗಳ ಮುಂದೆ ಹತಾಶೆ ತೋರಿಸಿಕೊಳ್ಳಬೇಡಿ. ಹೊಸದಾಗಿ ಪರಿಚಿತರಾಗಿರುವವರಿಂದ ನಿಮಗೆ ಅನುಕೂಲವಾದೀತು. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷಕ್ಕೆ ಎಡೆಮಾಡಿಕೊಡಬೇಡಿ. ಇನ್ನೊಬ್ಬರಿಗೆ ಉಪಕಾರ ಮಾಡುವಾಗ ಪೂರ್ವಾಪರ ತಿಳಿದು ಮುನ್ನಡೆಯಿರಿ. ಕುಲದೇವರ ಪ್ರಾರ್ಥನೆಯಿಂದ ನೆಮ್ಮದಿ ಸಿಗಲಿದೆ.

ತುಲಾ: ಹಿರಿಯರಿಗೆ ಧಾರ್ಮಿಕ ಸ್ಥಳಗಳ ಸಂದರ್ಶನ ಯೋಗ. ನಿಮ್ಮ ಬಹುದಿನಗಳ ಆಸೆ ಸದ್ಯದಲ್ಲೇ ಕೂಡಿಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಕೂಡಿಟ್ಟ ಹಣ ಅಗತ್ಯಕ್ಕೆ ಖರ್ಚಾಗಿ ಹೋದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ನಿಮಗೆ ಆಗಿಬರಲ್ಲ ಎಂದುಕೊಂಡವರಿಂದಲೇ ಇಂದು ನಿಮ್ಮ ಕೆಲಸಕ್ಕೆ ಸಹಾಯವಾದೀತು. ಗುರುಹಿರಿಯರಿಂದ ಉಪಯುಕ್ತ ಸಲಹೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಚಿಂತೆ ಬೇಡ.

ಧನು: ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಸಂಗಾತಿಯ ಸಲಹೆ ಪಾಲಿಸಬೇಕಾಗುತ್ತದೆ. ವ್ಯವಹಾರದಲ್ಲಿ ಚುರುಕುತನವಿದ್ದರೆ ನಿಮಗೆ ಅನುಕೂಲವಾದೀತು.

ಮಕರ: ಸರಕಾರಿ ಉದ್ಯೋಗಿಗಳಿಗೆ ಬಡ್ತಿ ಅವಕಾಶಕ್ಕೆ ಮೇಲಧಿಕಾರಿಗಳಿಂದಲೇ ಅಡ್ಡಿ ಉಂಟಾದೀತು. ಮನಸ್ಸಿನ ಹತಾಶೆಯನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.

ಕುಂಭ: ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮಗೆ ಸಿಗಲಿದೆ. ಕೌಟುಂಬಿಕವಾಗಿ ಪರಸ್ಪರ ಸಹಕಾರ, ಸಂತೋಷವಿರಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಕುಟುಂಬ ಸದಸ್ಯರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗ. ದಾಂಪತ್ಯದಲ್ಲಿ ಅನುರಾಗ ವೃದ‍್ಧಿಯಾಗಲಿದೆ. ಮಕ್ಕಳ ಭವಿಷ್ಯಕ್ಕಾಗಿ ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಮುಂದಿನ ಸುದ್ದಿ
Show comments