Publish Date: Fri, 01 Feb 2019 (09:02 IST)
Updated Date: Fri, 01 Feb 2019 (09:03 IST)
ಬೆಂಗಳೂರು: ಪ್ರತಿಯೊಂದು ಋತುವಿಗೆ ಅನುಸಾರವಾಗಿ ನಮ್ಮ ಆಹಾರದ ನಿಯಮಗಳು ಬದಲಾಗಬೇಕು. ಹಾಗಿದ್ದರೆ ಮಾತ್ರ ಆರೋಗ್ಯವೂ ಚೆನ್ನಾಗಿರುತ್ತದೆ.
ವಾತಾವರಣದ ಬದಲಾವಣೆಗೆ ನಮ್ಮನ್ನು ಹೊಂದಿಕೊಳ್ಳಲು ಮನುಷ್ಯ ಆಹಾರದಲ್ಲಿ ಬದಲಾವಣೆ ಮಾಡಲೇಬೇಕಾಗುತ್ತದೆ. ನಮ್ಮ ದೇಶದಲ್ಲಿ ಮಳೆ, ಚಳಿ ಮತ್ತು ಬೇಸಿಗೆಗಾಲ ಎಂಬ ಮೂರು ಮುಖ್ಯ ಋತುಗಳಿವೆ. ಪ್ರತಿಯೊಂದು ಮುಖ್ಯ ಋತುವು ಎರಡು ಋತುಗಳಲ್ಲಿ ವಿಭಜನೆಯಾಗುತ್ತದೆ. ವಿಭಜನೆಯಾದ ಋತುವಿನಲ್ಲಿ ಎರಡು ತಿಂಗಳಿರುತ್ತವೆ. ಆರು ಋತುಗಳು ಸೇರಿ ಒಂದು ವರ್ಷವಾಗುತ್ತದೆ.
ಶಿಶಿರ ಋತು
ಈ ಕಾಲದಲ್ಲಿ ಜೀರ್ಣಶಕ್ತಿಯು ಉತ್ತಮವಾಗಿರುತ್ತದೆ. ಸಿಹಿ, ಹುಳಿ ಮತ್ತು ಉಪ್ಪುಳ್ಳ ರಸಾತ್ಮಕ ಪದಾರ್ಥಗಳನ್ನು ಸೇವಿಸಬೇಕು. ಖಾರ, ಕಹಿ ಮತ್ತು ಒಗರು ರಸಾತ್ಮಕ ಪದಾರ್ಥಗಳನ್ನು ಸೇವಿಸಬಾರದು. ಎಣ್ಣೆ ಮತ್ತು ತುಪ್ಪವನ್ನು ಸೇವಿಸಬಹುದು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ