Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಮಂಗಳವಾರ, 23 ಏಪ್ರಿಲ್ 2019 (07:21 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಒಂದು ರೀತಿಯ ಅಭದ್ರತೆಯ ಭಾವ ಕಾಡಲಿದೆ. ಮಾನಸಿಕ ನೆಮ್ಮದಿಗಾಗಿ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡುವುದನ್ನು ಮರೆಯಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆಯಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಷಭ: ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಸಹೋದರರ ಜವಾಬ್ಧಾರಿ ಹೆಗಲಿಗೇರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಂಚಾರದಲ್ಲಿ ಜಾಗ್ರೆತೆ ವಹಿಸಿ.

ಮಿಥುನ: ಇಂದು ದೈವಾನುಕೂಲ ನಿಮ್ಮ ಮೇಲಿದ್ದು, ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ. ಆರ್ಥಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗುವುದು. ಮನೆ, ಆಸ್ತಿ ಖರೀದಿಗೆ ಚಿಂತನೆ ಮಾಡುವಿರಿ.  ಕೌಟುಂಬಿಕವಾಗಿಯೂ ನೆಮ್ಮದಿಯ ದಿನ.

ಕರ್ಕಟಕ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಹೊಸ ಪಾಲು ವ್ಯವಹಾರಕ್ಕೆ ಕೈಹಾಕುವಿರಿ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಲಿದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆ ಕಂಡು ಸಹೋದ್ಯೋಗಿಗಳೇ ಅಸೂಯೆ ಪಡುವರು. ಸಾಮಾಜಿಕವಾಗಿ ನೀವು ಮಾಡುವ ಕೆಲಸಗಳಿಗೆ ಮನ್ನಣೆ ಸಿಕ್ಕಿ ಸ್ಥಾನ ಮಾನಗಳು ಉತ್ತಮವಾಗುವುದು. ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ.

ಕನ್ಯಾ: ಕಷ್ಟ ಎಂದು ಬಂದವರಿಗೆ ಸಾಲ ಕೊಡಲು ಹೋಗಿ ಸಂಕಷ್ಟಕ್ಕೆ ಈಡಾಗುವಿರಿ. ಎಚ್ಚರಿಕೆ ಅಗತ್ಯ. ಹಿತ ಶತ್ರುಗಳು ಬೆನ್ನ ಹಿಂದೇ ಇರುವರು. ಆದರೆ ಕೌಟುಂಬಿಕವಾಗಿ ನೆಮ್ಮದಿಯ ದಿನ. ಸಂಗಾತಿ, ಮಕ್ಕಳಿಂದ ಸಂತೋಷ ಅನುಭವಿಸುವಿರಿ.

ತುಲಾ: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂತಸದ ವಾತಾವರಣವಿರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪಾಲಿಗೆ ಬಂದಿದ್ದನ್ನು ಬಳಸಿಕೊಳ್ಳಿ.

ವೃಶ್ಚಿಕ: ಸಾಲ ಕೇಳಿಕೊಂಡು ಬರುವವರಿಗೆ ಇಂದು ಸಾಲ ಕೊಡಲು ಹೋದರೆ ಮರಳಿ ಬಾರದು. ಸಾಂಸಾರಿಕವಾಗಿ ಸಂಗಾತಿ, ಮಕ್ಕಳೊಂದಿಗೆ ಉತ್ತಮ ಸಮಯ ಕಳೆಯುವಿರಿ. ದಾಯಾದಿಗಳ ಕಲಹ ನಿವಾರಣೆಯಾಗಲಿದೆ.

ಧನು: ಪ್ರಯತ್ನಕ್ಕೆ ತಕ್ಕ ಫಲ ಪಡೆಯುವಿರಿ. ಮನೆಯ ಜವಾಬ್ಧಾರಿ ನಿಭಾಯಿಸಬೇಕಾದ ಸಮಯವಿದು. ಆದರೆ ಕೋಪದ ಕೈಗೆ ಬುದ್ಧಿ ಕೊಟ್ಟರೆ ಸಂಬಂಧ ಹಾಳಾಗಬಹುದು. ಅನವಶ್ಯಕ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ.

ಮಕರ: ಮಹಿಳೆಯರಿಗೆ ಇಂದು ಸ್ಥಾನ ಮಾನ ಹೆಚ್ಚಿ, ಉದ್ಯೋಗದಲ್ಲೂ ಯಶಸ್ಸು ಸಾಧಿಸಲು ಸಾಧ್ಯವಾಗುವ ಶುಭ ದಿನ. ಕೃಷಿ ಕ್ಷೇತ್ರದಲ್ಲಿರುವವರಿಗೆ ನೀರಿಗಾಗಿ ಪರದಾಟ ತಪ್ಪದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನಿರೀಕ್ಷಿತ ಕೆಲಸಗಳಿಗೆ ಅಡೆತಡೆಗಳಿದ್ದರೂ ಅಂತಿಮವಾಗಿ ಜಯ ನಿಮ್ಮದೇ. ವೃತ್ತಿರಂಗದಲ್ಲಿ ಅಭಿವೃದ್ಧಿ, ಮುನ್ನಡೆ ಗೋಚರಕ್ಕೆ ಬರುವುದು. ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು.

ಮೀನ: ಹೆಚ್ಚಿನ ಸಮಯವನ್ನು ಪ್ರೀತಿ ಪಾತ್ರರಿಗಾಗಿ ಮೀಸಲಿಡಬೇಕಾಗುತ್ತದೆ. ಕುಟುಂಬದವರೊಂದಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments