Select Your Language

Notifications

webdunia
webdunia
webdunia
webdunia

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ
ಬೆಂಗಳೂರು , ಶನಿವಾರ, 27 ಜುಲೈ 2019 (08:43 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಗೃಹ ಸಂಬಂಧೀ ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ಆರೋಗ್ಯ ಸಮಸ್ಯೆಗಳು ಮನಸ್ಸಿಗೆ ಬೇಸರವುಂಟು ಮಾಡಲಿದೆ. ದೇವರ ಧ್ಯಾನ ಮಾಡಿ.

ವೃಷಭ: ಎಷ್ಟೇ ಕಷ್ಟಗಳಿದ್ದರೂ ಆತ್ಮವಿಶ್ವಾಸದಿಂದ ಎದುರಿಸಿದರೆ ಜಯ ನಿಮ್ಮದೇ ಆಗಿರುತ್ತದೆ. ಅವಿವಾಹಿತರಿಗೆ ಮನಸ್ಸಿಗೆ ಇಷ್ಟವಾಗುವ ಸಂಬಂಧಗಳು ಕೂಡಿಬರಲಿದೆ. ಕುಲದೇವರ ಹರಕೆ ತೀರಿಸುವಿರಿ.

ಮಿಥುನ: ನಿರುದ್ಯೋಗಿಗಳು ಉದ್ಯೋಗ ಅರಸಿಕೊಂಡು ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲು ಮುಂದಾಗುವಿರಿ. ಸಂಗಾತಿ ಜತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ಕರ್ಕಟಕ: ನೆರೆಹೊರೆಯವರೊಂದಿಗೆ ಗಡಿ ತಂಟೆ ತಕರಾರುಗಳು ಎದುರಾಗಬಹುದು. ಹಿರಿಯರ ಮಧ್ಯಸ್ಥಿಕೆಗೆ ಮಹತ್ವ ಕೊಡಿ. ದುಡುಕಿನ ವರ್ತನೆ ಬೇಡ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನಮಾನ ಹೆಚ್ಚುವುದು. ಸಂಗಾತಿಯ ಪ್ರೀತಿ ಆದರಗಳಿಗೆ ಪಾತ್ರರಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಖರ್ಚುವೆಚ್ಚಗಳು ಹಿಡಿತದಲ್ಲಿರಲಿ.

ಕನ್ಯಾ: ಸಾಲ ಪಾವತಿ ಬಗ್ಗೆ ಚಿಂತೆಯಾಗುವುದು. ಅಪರಿಚಿತರನ್ನು ನಂಬಿ ಹೊಸ ವ್ಯವಹರಿಸಲು ಹೋಗಬೇಡಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ನಿಮ್ಮ ಸಹಕಾರ ಅನಿವಾರ್ಯವಾಗಲಿದೆ.

ತುಲಾ: ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೂ ನಿಮ್ಮ ನಿಕಟವರ್ತಿಗಳಿಗೆ ನಿಮ್ಮ ಕೆಲವೊಂದು ನಿರ್ಧಾರಗಳಿಂದ ತೊಂದರೆಯಾಗಲಿದೆ. ತಾಳ್ಮೆಯಿಂದ ವ್ಯವಹಾರ ಮಾಡುವುದು ಮುಖ್ಯ. ವಿದ್ಯಾರ್ಥಿಗಳಿಗೆ ನಿರೀಕ್ಷತ ಫಲಿತಾಂಶ ಬರುವುದು. ಚಿಂತೆ ಬೇಡ.

ವೃಶ್ಚಿಕ: ಪ್ರೇಮಿಗಳು ಮನೆಯವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗುವುದು. ಕೆಳ ಹಂತದ ನೌಕರ ವರ್ಗದವರಿಗೆ ಬಡ್ತಿ ಯೋಗವಿದೆ.

ಧನು: ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳನ್ನು ಮಾಡಬೇಕಾಗುತ್ತದೆ. ನಿಮ್ಮ ದುಡುಕು ವರ್ತನೆಯಿಂದ ಹಿರಿಯರ ಅಸಮಾಧಾನಕ್ಕೆ ಕಾರಣರಾಗುವಿರಿ. ಶುಭ ಮಂಗಲ ಕಾರ್ಯಗಳಿಗೆ ಖರ್ಚು ವೆಚ್ಚಗಳನ್ನು ಮಾಡಬೇಕಾಗುತ್ತದೆ.

ಮಕರ: ಇಷ್ಟಮಿತ್ರರೊಂದಿಗೆ ಭೋಜನ, ಪ್ರವಾಸ ಕೈಗೊಳ್ಳುವಿರಿ. ಆದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಡು ಮಾಡುವಿರಿ. ಸ್ವ ಉದ್ಯೋಗಿಗಳಿಗೆ ಆರ್ಥಿಕ ಲಾಭವಾಗಲಿದೆ.

ಕುಂಭ: ಕೆಲವೊಂದು ಹಳೆಯ ಕಹಿ ಘಟನೆಗಳು ಮನಸ್ಸಿಗೆ ಘಾಸಿ ಮಾಡಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ವರ್ತಿಸುವುದು ಮುಖ್ಯ. ಕೆಲಸದಲ್ಲಿ ಆಲಸ್ಯ ಕಂಡುಬರಬಹುದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು.

ಮೀನ: ದೈವಾನುಕೂಲದಿಂದ ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಆಸ್ತಿ, ಮನೆ ಖರೀದಿಗೆ ಇದು ಸಕಾಲ. ಆದರೆ ಹಿತ ಶತ್ರುಗಳಿಂದ ದೂರವಿರಿ. ಚಾಡಿ ಮಾತುಳನ್ನು ಅಲಕ್ಷಿಸುವುದು ಒಳಿತು.

Share this Story:

Follow Webdunia kannada

ಮುಂದಿನ ಸುದ್ದಿ

ಪದೇ ಪದೇ ಸಮಸ್ಯೆಗಳು ಕಾಡುತ್ತಿದ್ದರೆ ನಾಣ್ಯದಿಂದ ಹೀಗೆ ಮಾಡಿ