Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಶನಿವಾರ, 27 ಜುಲೈ 2019 (08:43 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಕಾರ್ಯಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಗೃಹ ಸಂಬಂಧೀ ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ಆರೋಗ್ಯ ಸಮಸ್ಯೆಗಳು ಮನಸ್ಸಿಗೆ ಬೇಸರವುಂಟು ಮಾಡಲಿದೆ. ದೇವರ ಧ್ಯಾನ ಮಾಡಿ.

ವೃಷಭ: ಎಷ್ಟೇ ಕಷ್ಟಗಳಿದ್ದರೂ ಆತ್ಮವಿಶ್ವಾಸದಿಂದ ಎದುರಿಸಿದರೆ ಜಯ ನಿಮ್ಮದೇ ಆಗಿರುತ್ತದೆ. ಅವಿವಾಹಿತರಿಗೆ ಮನಸ್ಸಿಗೆ ಇಷ್ಟವಾಗುವ ಸಂಬಂಧಗಳು ಕೂಡಿಬರಲಿದೆ. ಕುಲದೇವರ ಹರಕೆ ತೀರಿಸುವಿರಿ.

ಮಿಥುನ: ನಿರುದ್ಯೋಗಿಗಳು ಉದ್ಯೋಗ ಅರಸಿಕೊಂಡು ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲು ಮುಂದಾಗುವಿರಿ. ಸಂಗಾತಿ ಜತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ಕರ್ಕಟಕ: ನೆರೆಹೊರೆಯವರೊಂದಿಗೆ ಗಡಿ ತಂಟೆ ತಕರಾರುಗಳು ಎದುರಾಗಬಹುದು. ಹಿರಿಯರ ಮಧ್ಯಸ್ಥಿಕೆಗೆ ಮಹತ್ವ ಕೊಡಿ. ದುಡುಕಿನ ವರ್ತನೆ ಬೇಡ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನಮಾನ ಹೆಚ್ಚುವುದು. ಸಂಗಾತಿಯ ಪ್ರೀತಿ ಆದರಗಳಿಗೆ ಪಾತ್ರರಾಗುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಖರ್ಚುವೆಚ್ಚಗಳು ಹಿಡಿತದಲ್ಲಿರಲಿ.

ಕನ್ಯಾ: ಸಾಲ ಪಾವತಿ ಬಗ್ಗೆ ಚಿಂತೆಯಾಗುವುದು. ಅಪರಿಚಿತರನ್ನು ನಂಬಿ ಹೊಸ ವ್ಯವಹರಿಸಲು ಹೋಗಬೇಡಿ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ನಿಮ್ಮ ಸಹಕಾರ ಅನಿವಾರ್ಯವಾಗಲಿದೆ.

ತುಲಾ: ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೂ ನಿಮ್ಮ ನಿಕಟವರ್ತಿಗಳಿಗೆ ನಿಮ್ಮ ಕೆಲವೊಂದು ನಿರ್ಧಾರಗಳಿಂದ ತೊಂದರೆಯಾಗಲಿದೆ. ತಾಳ್ಮೆಯಿಂದ ವ್ಯವಹಾರ ಮಾಡುವುದು ಮುಖ್ಯ. ವಿದ್ಯಾರ್ಥಿಗಳಿಗೆ ನಿರೀಕ್ಷತ ಫಲಿತಾಂಶ ಬರುವುದು. ಚಿಂತೆ ಬೇಡ.

ವೃಶ್ಚಿಕ: ಪ್ರೇಮಿಗಳು ಮನೆಯವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗುವುದು. ಕೆಳ ಹಂತದ ನೌಕರ ವರ್ಗದವರಿಗೆ ಬಡ್ತಿ ಯೋಗವಿದೆ.

ಧನು: ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳನ್ನು ಮಾಡಬೇಕಾಗುತ್ತದೆ. ನಿಮ್ಮ ದುಡುಕು ವರ್ತನೆಯಿಂದ ಹಿರಿಯರ ಅಸಮಾಧಾನಕ್ಕೆ ಕಾರಣರಾಗುವಿರಿ. ಶುಭ ಮಂಗಲ ಕಾರ್ಯಗಳಿಗೆ ಖರ್ಚು ವೆಚ್ಚಗಳನ್ನು ಮಾಡಬೇಕಾಗುತ್ತದೆ.

ಮಕರ: ಇಷ್ಟಮಿತ್ರರೊಂದಿಗೆ ಭೋಜನ, ಪ್ರವಾಸ ಕೈಗೊಳ್ಳುವಿರಿ. ಆದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಹಿರಿಯರ ತೀರ್ಥ ಯಾತ್ರೆಗೆ ಏರ್ಪಾಡು ಮಾಡುವಿರಿ. ಸ್ವ ಉದ್ಯೋಗಿಗಳಿಗೆ ಆರ್ಥಿಕ ಲಾಭವಾಗಲಿದೆ.

ಕುಂಭ: ಕೆಲವೊಂದು ಹಳೆಯ ಕಹಿ ಘಟನೆಗಳು ಮನಸ್ಸಿಗೆ ಘಾಸಿ ಮಾಡಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ವರ್ತಿಸುವುದು ಮುಖ್ಯ. ಕೆಲಸದಲ್ಲಿ ಆಲಸ್ಯ ಕಂಡುಬರಬಹುದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು.

ಮೀನ: ದೈವಾನುಕೂಲದಿಂದ ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಆಸ್ತಿ, ಮನೆ ಖರೀದಿಗೆ ಇದು ಸಕಾಲ. ಆದರೆ ಹಿತ ಶತ್ರುಗಳಿಂದ ದೂರವಿರಿ. ಚಾಡಿ ಮಾತುಳನ್ನು ಅಲಕ್ಷಿಸುವುದು ಒಳಿತು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments