Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಮಂಗಳವಾರ, 30 ಜುಲೈ 2019 (08:47 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗುವುದು. ಮನಸ್ಸಿನ ಒಳಗಿನ ಬೇಸರ ಮರೆಮಾಚಿ ಕರ್ತವ್ಯ ಪಾಲನೆ ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ. ಮಕ್ಕಳಿಂದ ಶುಭ ಫಲ ನಿರೀಕ್ಷಿಸಬಹುದು. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ವೃಷಭ: ದೈವಾನುಕೂಲದಿಂದ ಅಂದುಕೊಂಡ ಕಾರ್ಯ ನೆರವೇರಿಸುವಿರಿ. ನಿಮ್ಮ ದೃಢ ನಿರ್ಧಾರಗಳು ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ಆರ್ಥಿಕವಾಗಿ ಬರಬೇಕಾದ ಹಣ ಪಾವತಿಯಾಗಲಿದೆ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಿ.

ಮಿಥುನ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಒದ್ದಾಟ ತಪ್ಪದು. ತಾಳ್ಮೆ ಸಮಾಧಾನದಿಂದ ಮುನ್ನಡೆಯಬೇಕಾದ ದಿನವಿದು. ಸಾಂಸಾರಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬಂದೀತು.

ಕರ್ಕಟಕ: ಕೆಲಸ ಕಾರ್ಯಗಳಲ್ಲಿ ವಿಳಂಬ ಗತಿ ತೋರಿಬರಲಿದೆ. ಹೊಸ ಜನರು, ಬಂಧು ಮಿತ್ರರ  ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಯಶಸ್ಸು ಸಾಧಿಸಲಿದ್ದಾರೆ.

ಸಿಂಹ: ನಿರುದ್ಯೋಗಿಗಳು ಸ್ವ ಉದ್ಯೋಗದತ್ತ ಮನಸ್ಸು ಮಾಡಲಿದ್ದಾರೆ. ದೃಢ ನಿರ್ಧಾರದಿಂದ ಮುನ್ನಡೆಯಿರಿ. ಅನಿರೀಕ್ಷಿತವಾಗಿ ದೊರಕುವ ಯಶಸ್ಸು ಮನಸ್ಸಿಗೆ ಸಮಾಧಾನ ನೀಡಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಸಾಂಸಾರಿಕವಾಗಿ ನಿರ್ಧಾರ ತೆಗೆದುಕೊಳ್ಳಲು ಚಂಚಲ ಮನಸ್ಸು ತೊಂದರೆ ಉಂಟುಮಾಡಬಹುದು. ಸಂಗಾತಿಯ ಸಹಕಾರ ಸಿಗುವುದು. ದೂರ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ.

ತುಲಾ: ಮೇಲಧಿಕಾರಿಗಳು ನಿಮ್ಮ ಬಗ್ಗೆ ಅತಿಯಾದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಪಾಲಿಗೆ ಬಂದಿದ್ದನ್ನು ಬಳಸಿಕೊಳ್ಳುವ ಜಾಣತನ ಪ್ರದರ್ಶಿಸಿ. ವಾಹನ ಸವಾರರಿಗೆ ವಿಘ್ನಗಳು ಎದುರಾದೀತು. ಎಚ್ಚರಿಕೆ ಅಗತ್ಯ.

ವೃಶ್ಚಿಕ: ಕೃಷಿ ಕ್ಷೇತ್ರದಲ್ಲಿರುವವರ ಸಮಸ್ಯೆಗಳು ಪರಿಹಾರವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಕುಲದೇವರ ಹರಕೆ ತೀರಿಸುವಿರಿ. ಕೌಟುಂಬಿಕ ಜವಾಬ್ಧಾರಿಗಳನ್ನು ನಿಭಾಯಿಸಲು ಓಡಾಟ ನಡೆಸಬೇಕಾಗುತ್ತದೆ.

ಧನು: ಸಂತಾನಾಪೇಕ್ಷಿತ ದಂಪತಿಗಳಿಗೆ ಹೊಸ ಆಶಾಕಿರಣ ಮೂಡಲಿದೆ. ಹಾಗಿದ್ದರೂ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾಗಬಹುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟರಷ್ಟೇ ಉತ್ತಮ ಫಲ ಸಿಗಬಹುದು.

ಮಕರ: ಸರಕಾರಿ ಕೆಲಸಗಳಲ್ಲಿ ನಿರಾಯಾಸವಾಗಿ ಗೆಲುವು ಸಾಧಿಸುವಿರಿ. ಹಿರಿಯರ ಮಾತಿಗೆ ಕಿವಿಗೊಡಿ. ವ್ಯಾಪಾರಿಗಳು ನಿವ್ವಳ ಲಾಭ ಗಳಿಸುವರು. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಪ್ರಶಂಸೆಗೊಳಗಾಗಲಿದ್ದಾರೆ.

ಕುಂಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಆದರೆ ಮನೆಯಲ್ಲಿ ಸಂಗಾತಿಯಿಂದ ನಿಂದನೆಗೆ ಗುರಿಯಾಗುವಿರಿ. ಹಿತಶತ್ರುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಆರ್ಥಿಕವಾಗಿ ಹಣ ಗಳಿಕೆ ಮಾಡುವಿರಿ.

ಮೀನ: ನಿರುದ್ಯೋಗಿಗಳು ಸದವಾಕಾಶಕ್ಕಾಗಿ ಕಾಯಬೇಕಾಗುತ್ತದೆ. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ನೂತನ ದಂಪತಿಗಳಲ್ಲಿ ವಿರಸ ಮೂಡಬಹುದು. ತಾಳ್ಮೆಯಿಂದಿದ್ದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments