Select Your Language

Notifications

webdunia
webdunia
webdunia
webdunia

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ
ಬೆಂಗಳೂರು , ಸೋಮವಾರ, 15 ಏಪ್ರಿಲ್ 2019 (06:53 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಭೂ ಸಂಬಂಧ ವ್ಯವಹಾರ ನಡೆಸುವಿರಿ. ಆದರೆ ವಂಚನೆಗೊಳಗಾದಂತೆ ಎಚ್ಚರಿಕೆ ವಹಿಸಬೇಕು. ಹಿರಿಯರಿಗೆ ಪ್ರವಾಸಗಳಿಂದ ಸಂತಸವಾಗುವುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ವಿಘ್ನಗಳು ಎದುರಾದೀತು.

ವೃಷಭ: ವಾಹನ, ಹೊಸ ವಸ್ತು ಖರೀದಿಗೆ ಧನವ್ಯಯವಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗುವುದು. ಆದರೆ ಕುಟುಂಬದಲ್ಲಿ ಸಂಗಾತಿಯೊಂದಿಗೆ ಸಾಮರಸ್ಯದ ಕೊರತೆ ಎದುರಾಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಅತಿಯಾದ ಒಳ್ಳೆಯತನವೂ ಒಳ್ಳೆಯದಲ್ಲ. ಸಾಲ ಕೇಳಿಕೊಂಡು ಬರುವವರಿಗೆ ಇಂದು ಸಾಲ ಕೊಡಲು ಹೋದರೆ ಮರಳಿ ಬಾರದು. ವ್ಯಾಪಾರಿ ವರ್ಗದವರು ನಷ್ಟ ಅನುಭವಿಸಬೇಕಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ದೂರ ಪ್ರಯಾಣ ಮಾಡಬೇಕಾಗಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಧನಾಗಮನವಾಗಿ ಸಂತಸವಾಗುವುದು.

ಸಿಂಹ: ವ್ಯವಹಾರದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ. ಕಷ್ಟ ಬಂದಾಗ ಜಾಣ್ಮೆಯಿಂದ ನಿಭಾಯಿಸಿದರೆ ಪರಿಹಾರ ಸಿಗುವುದು. ನೆರೆಹೊರೆಯವರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ದೈಹಿಕ ಆರೋಗ್ಯ ಹದಗೆಡಬಹುದು.

ಕನ್ಯಾ: ವಿದ್ಯಾರ್ಥಿಗಳು ನಿರೀಕ್ಷಿತ ಫಲಿತಾಂಶ ಸಿಗದೇ ನಿರಾಶೆ ಅನುಭವಿಸುವರು. ಕುಟುಂಬದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗದೇ ಬೇಸರವಾಗಬಹುದು. ನೂತನ ವ್ಯವಹಾರ ಮಾಡುವುದಿದ್ದರೆ ಸ್ವಲ್ಪ ದಿನ ಕಾಯುವುದು ಒಳ್ಳೆಯದು.

ತುಲಾ: ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಮನಸ್ತಾಪ ಮಾಡಿಕೊಳ್ಳುತ್ತೀರಿ. ತಾತ್ಕಾಲಿಕ ಉದ್ಯೋಗಿಗಳಿಗೆ ಸ್ಥಿರ ಉದ್ಯೋಗ ಲಭಿಸುತ್ತದೆ.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ಆದರೆ ಪ್ರೇಮಿಗಳು ಮನೆಯವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ.

ಧನು: ವಿವಾಹಾಪೇಕ್ಷಿಗಳು, ಪ್ರೇಮಿಗಳು ಇಂದು ಸಿಹಿ ಸುದ್ದಿ ನಿರೀಕ್ಷಿಸಬಹುದು.ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರುವುದು. ಸಂಗಾತಿಯ ಅಲಂಕಾರಿಕ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ರಾಜಕೀಯದಲ್ಲಿ ಮುನ್ನಡೆ.

ಮಕರ: ಉದ್ಯೋಗದಲ್ಲಿ ಸ್ಥಾನಪಲ್ಲಟ, ಬಡ್ತಿ ಯೋಗವಿದೆ. ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ವ್ಯಾಪಾರ, ವ್ಯವಹಾರಗಳಿಗೆ ಕೈ ಹಾಕಿದರೆ ಅಧಿಕ ಲಾಭ ಗಳಿಸುವಿರಿ. ಕುಲದೇವರ ಪ್ರಾರ್ಥನೆಯಿಂದ ಹೆಚ್ಚಿನ ಶುಭ ಫಲ ಸಿಗುವುದು.

ಕುಂಭ: ಇತರರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಬಂದ ಅವಕಾಶಗಳು ಕೈ ತಪ್ಪಿ ಬೇಸರವಾಗುವುದು. ಯಾವುದೇ ಕೆಲಸದಲ್ಲೂ ಸತತ ಪ್ರಯತ್ನ ಅಗತ್ಯ. ಮಿತ್ರರ ಸಹಕಾರ ದೊರೆಯಲಿದೆ.

ಮೀನ: ಕುಟುಂಬದ ಕೆಲವೊಂದು ಜವಾಬ್ಧಾರಿಗಳು ಹೆಗಲಿಗೇರಲಿವೆ. ಸಹೋದರರ ವಿವಾಹ ಸಂಬಂಧ ಓಡಾಟ ನಡೆಸಬೇಕಾಗುತ್ತದೆ. ಆದರೆ ಆರೋಗ್ಯವೂ ಕೈ ಕೊಡುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚು ವೆಚ್ಚಗಳೂ ತಲೆದೋರಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಈ ಎಲೆಯನ್ನು ನಿಮ್ಮ ಕಪಾಟಿನಲ್ಲಿಟ್ಟರೆ ಧನಲಾಭ ಖಂಡಿತ