Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಶನಿವಾರ, 20 ಏಪ್ರಿಲ್ 2019 (05:58 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಇಷ್ಟ  ಮಿತ್ರರು, ಬಂಧುಗಳ ಭೇಟಿ ಮನಸ್ಸಿಗೆ ನೆಮ್ಮದಿ, ಸಂತೋ಼ಷ ಕೊಡಲಿದೆ. ಭಾವನಾತ್ಮಕವಾಗಿ ನಿರ್ಧಾರ ಕೈಗೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿ ಬರಲಿದೆ.

ವೃಷಭ: ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಸಹೋದರರ ಜವಾಬ್ಧಾರಿ ಹೆಗಲಿಗೇರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಂಚಾರದಲ್ಲಿ ಜಾಗ್ರೆತೆ ವಹಿಸಿ.

ಮಿಥುನ: ಭೂಮಿ, ಆಸ್ತಿ ಖರೀದಿ ಮಾಡುವುದಿದ್ದರೆ ಸ್ವಲ್ಪ ದಿನ ಕಾಯುವುದು ಒಳ್ಳೆಯದು. ಮಕ್ಕಳ ಆರೋಗ್ಯ ಹದಗೆಡುವುದು. ಕಾರ್ಮಿಕ ವರ್ಗದವರಿಗೆ ನಷ್ಟ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಯಾಗಲಿದೆ.

ಕರ್ಕಟಕ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ಅಂದುಕೊಂಡ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಹೊಸ ಪಾಲು ವ್ಯವಹಾರಕ್ಕೆ ಕೈಹಾಕುವಿರಿ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಲಿದೆ.

ಸಿಂಹ: ವಿದ್ಯಾರ್ಥಿಗಳಿಗೆ ತೀವ್ರ ಪ್ರಯತ್ನ, ಪರಿಶ್ರಮ ಅಗತ್ಯ. ಕಾರ್ಯಾನುಕೂಲಕ್ಕೆ ಸಾಕಷ್ಟು ಅಡೆತಡೆಗಳು ತೋರಿಬಂದಾವು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ತಾಳ್ಮೆ ಮತ್ತು ಸಮಾಧಾನದಿಂದ ಮುನ್ನಡೆಯಿರಿ.

ಕನ್ಯಾ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭಿಸುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದ್ದು, ಸಂಭ್ರಮದ ವಾತಾವರಣವಿರುವುದು. ವಾಹನ ಚಲಾಯಿಸುವಾಗ ಎಚ್ಚರಿಕೆ ಅಗತ್ಯ.

ತುಲಾ: ಬಯಸಿದ ಕೆಲಸಗಳನ್ನು ಹಂತ ಹಂತವಾಗಿ ನೆರವೇರಿಸಲಿದ್ದೀರಿ. ಆರ್ಥಿಕ ಮುಗ್ಗಟ್ಟುಗಳು ಎದುರಾದೀತು. ಮಹಿಳೆಯರಿಗೆ ಮಾನಸಿಕ ವೇದನೆ ಎದುರಾಗಲಿದೆ. ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡು ನೆಮ್ಮದಿ ಪಡೆಯುವಿರಿ.

ವೃಶ್ಚಿಕ: ಸಾಲ ಕೇಳಿಕೊಂಡು ಬರುವವರಿಗೆ ಇಂದು ಸಾಲ ಕೊಡಲು ಹೋದರೆ ಮರಳಿ ಬಾರದು. ಸಾಂಸಾರಿಕವಾಗಿ ಸಂಗಾತಿ, ಮಕ್ಕಳೊಂದಿಗೆ ಉತ್ತಮ ಸಮಯ ಕಳೆಯುವಿರಿ. ದಾಯಾದಿಗಳ ಕಲಹ ನಿವಾರಣೆಯಾಗಲಿದೆ.

ಧನು: ಪ್ರಯತ್ನಕ್ಕೆ ತಕ್ಕ ಫಲ ಪಡೆಯುವಿರಿ. ಮನೆಯ ಜವಾಬ್ಧಾರಿ ನಿಭಾಯಿಸಬೇಕಾದ ಸಮಯವಿದು. ಆದರೆ ಕೋಪದ ಕೈಗೆ ಬುದ್ಧಿ ಕೊಟ್ಟರೆ ಸಂಬಂಧ ಹಾಳಾಗಬಹುದು. ಅನವಶ್ಯಕ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ.

ಮಕರ: ದೈವಾನುಗ್ರಹದಿಂದ ಸಾಂಸಾರಿಕವಾಗಿಯೂ ಉದ್ಯೋಗ ಕ್ಷೇತ್ರದಲ್ಲೂ ನೆಮ್ಮದಿಯ ವಾತಾವರಣವಿರುತ್ತದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಪ್ರವಾಸಕ್ಕೆ ತೆರಳುವಿರಿ.

ಕುಂಭ: ನಿರೀಕ್ಷಿತ ಕೆಲಸಗಳಿಗೆ ಅಡೆತಡೆಗಳಿದ್ದರೂ ಅಂತಿಮವಾಗಿ ಜಯ ನಿಮ್ಮದೇ. ವೃತ್ತಿರಂಗದಲ್ಲಿ ಅಭಿವೃದ್ಧಿ, ಮುನ್ನಡೆ ಗೋಚರಕ್ಕೆ ಬರುವುದು. ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು.

ಮೀನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments