Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಭಾನುವಾರ, 28 ಏಪ್ರಿಲ್ 2019 (08:55 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಸಮಾಧಾನ, ಶಾಂತಿಯುತ ಮಾತುಕತೆಯಿಂದ ಎಂತಹದ್ದೇ ಸಮಸ್ಯೆ ಬಂದರೂ ಪರಿಹರಿಸಬಹುದು ಎಂಬುದನ್ನು ಮನಗಾಣಿರಿ. ಸಂಗಾತಿಯಿಂದ ಮನಸ್ಸಿಗೆ ಬೇಸರವಾಗುವಂತಹ ಘಟನೆಗಳು ನಡೆಯಲಿವೆ. ತಾಳ್ಮೆಯೇ ಎಲ್ಲದಕ್ಕೂ ಮುಖ್ಯ.

ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಹೆಚ್ಚುವುದು. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿ ಸಂತಸವಾಗುವುದು. ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ಅರ್ಧಕ್ಕೆ ನಿಂತ ನಿಮ್ಮ ಯೋಜನೆಗಳು ಪುನರಾರಂಭವಾಗಲಿದೆ.

ಮಿಥುನ: ಯಾಕೋ ಇಂದು ನಿಮ್ಮ ಗ್ರಹಚಾರ ಕೆಟ್ಟಿದೆ ಎನಿಸಬಹುದು. ಕೈಗೊಂಡ ಕೆಲಸಗಳಿಗೆ ವಿಘ್ನಗಳು ಎದುರಾಗಬಹುದು. ಸಂಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯುವಿರಿ. ನೆಮ್ಮದಿಗಾಗಿ ದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಮಕ್ಕಳ ವಿದ್ಯಾಭ್ಯಾಸ, ಭವಿಷ್ಯದಲ್ಲಿ ಏಳಿಗೆ ಕಾಣುವಿರಿ. ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಅವಿವಾಹಿತರಿಗೆ ಕಂಕಣ ಬಲ ಸದ್ಯದಲ್ಲೇ ಕೂಡಿಬರಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಪಡೆಯುವರು.

ಸಿಂಹ: ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಲಿವೆ. ಆದರೆ ನಿಮ್ಮ ಜವಾಬ್ಧಾರಿಯುತ ನಡುವಳಿಕೆಯಿಂದ ಪ್ರಶಂಸೆಗೊಳಗಾಗುವಿರಿ. ಆದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ.

ಕನ್ಯಾ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಸಾಧ್ಯತೆಯಿದೆ. ಹಿತ ಶತ್ರುಗಳು ವಂಚಿಸಲು ಹೊಂಚು ಹಾಕಿರುತ್ತಾರೆ. ಎಚ್ಚರಿಕೆ ಅಗತ್ಯ. ಕಾಗದ, ಪತ್ರ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿಭಾಯಿಸಿ. ಮಿತ್ರರ ಬೆಂಬಲ ಸಿಗುವುದು.

ತುಲಾ: ವಿನಾಕಾರಣ ಅಪವಾದಕ್ಕೆ ಗುರಿಯಾಗುವಿರಿ. ಕೈಗೊಂಡ ಕಾರ್ಯಗಳಲ್ಲಿ ಸೋಲಾಗುವುದು. ಎಚ್ಚರಿಕೆಯಿಂದ ಹೆಜ್ಜೆಯಿಟ್ಟರೆ ಯಶಸ್ಸು ನಿಮ್ಮದಾಗಲಿದೆ. ವ್ಯಾಪಾರದಲ್ಲಿ ಕೊಂಚ ನಷ್ಟವಾದದರೂ ತಾಳ್ಮೆ ಕಳೆದುಕೊಳ್ಳಬೇಡಿ.

ವೃಶ್ಚಿಕ: ಕಾರ್ಯದಲ್ಲಿ ವಿಘ್ನಗಳು ಉಂಟಾದಾಗ ಭಯಪಡಬೇಡಿ. ಕೌಟುಂಬಿಕವಾಗಿ ಸಂಗಾತಿಯಿಂದ ಸೂಕ್ತ ಸಲಹೆಗಳು ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ವರ್ತಿಸುವಾಗ ಎಚ್ಚರಿಕೆಯಿರಲಿ.

ಧನು: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಬಹುದು. ಸನ್ಮಿತ್ರರ ಸಹಕಾರದಿಂದ ಬೆಟ್ಟದಂತೆ ಬಂದ ಕಷ್ಟಗಳು ದೂರವಾಗುವುದು. ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಎಚ್ಚರಿಕೆ ಅಗತ್ಯ.

ಮಕರ: ನಿರುದ್ಯೋಗಿಗಳು ಕೊಂಚ ನಿರಾಶೆ ಅನುಭವಿಸುವರು. ಪ್ರೇಮಿಗಳಿಗೆ ಶುಭ ದಿನ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ಆದರೆ ಕೌಟುಂಬಿಕವಾಗಿ ನೀವು ಕೈಗೊಳ್ಳುವ ನಿರ್ಧಾರಗಳು ಹಿರಿಯರ ಬೇಸರಕ್ಕೆ ಕಾರಣವಾಗಬಹುದು.

ಕುಂಭ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ಹೆಚ್ಚುವುದು. ಲೆಕ್ಕ ಪತ್ರಗಳನ್ನು ಸರಿಯಾಗಿಟ್ಟುಕೊಳ್ಳದಿದ್ದರೆ ಮುಂದೆ ಅಪಾಯ ತಪ್ಪದು. ಕನಸು ನನಸು ಮಾಡಿಕೊಳ್ಳಲು ಸತತ ಪ್ರಯತ್ನ ಅಗತ್ಯ.

ಮೀನ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಕಾಣುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಆದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆ ಕಂಡುಬರಬಹುದು. ಆದಾಯಕ್ಕೆ ಕೊರತೆಯಿರದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments